ಜಮೀರ್ ಅಹಮದ್ ಖಾನ್ 
ರಾಜ್ಯ

ಕೋಗಿಲು ಅಕ್ರಮ ಮನೆ ತೆರವು: 26 ಕುಟುಂಬಗಳಿಗೆ ವಸತಿ ಭಾಗ್ಯ; ಮನೆ ಹಂಚಿಕೆಗೆ ಮಾನದಂಡವೇನು? ಜಮೀರ್ ಹೇಳಿದ್ದು ಹೀಗೆ...

ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು. ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ.

ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು. ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ.

ಹೊರಗಿನವರಿಗೆ ಯಾವುದೇ ಕಾರಣಕ್ಕೂ ಮನೆ ನೀಡಲ್ಲ. 26 ಜನರ ದಾಖಲೆಗಳು ಸೂಕ್ತವಾಗಿದ್ದು ಅವರಿಗೆ ಮನೆ ಹಂಚಿಕೆ ಮಾಡುತ್ತೇವೆ. ಸಿಎಂ ಈಗಾಗಲೇ ಸಭೆ ಮಾಡಿ ಮನೆ ನೀಡಲು ಸೂಚಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕ್ಯಾಬಿನೆಟ್‌ನಲ್ಲಿ ಯಾವುದೇ ಚರ್ಚೆ ಮಾಡಲ್ಲ, ಸಿಎಂ ಈಗಾಗಲೇ ಮೀಟಿಂಗ್ ಮಾಡಿ ಸೂಚನೆ ಕೊಟ್ಟಿದ್ದಾರೆ. 26 ಜನರ ದಾಖಲೆಗಳು ಕ್ಲಿಯರ್ ಆಗಿದೆ ಅವರಿಗೆ ಇವತ್ತು ಮನೆ ಕೊಡಬಹುದು ಎಂದು ತಿಳಿಸಿದರು.

ಮಾನದಂಡಗಳು

  • ಕರ್ನಾಟಕದ ಬೇರೆ ಭಾಗದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರಬೇಕು.

  • ಕೋಗಿಲು ಲೇಔಟ್‌ನಲ್ಲಿ ಐದು ವರ್ಷದಿಂದ ವಾಸ ಇರಬೇಕು.

  • ಮಾತೃ ಭಾಷೆ ಬೇರೆ ಆಗಿದ್ದರೂ ಕರ್ನಾಟಕದವರಾಗಿರಬೇಕು.

  • ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸಿದ್ದಲ್ಲಿ ರೇಷನ್ ಕಾರ್ಡ್ ಪರಿಗಣನೆ.

  • ವೋಟರ್ ಐಡಿ, ರೇಷನ್ ಕಾರ್ಡ್, ಮಕ್ಕಳ ಶಾಲಾ ದಾಖಲಾತಿ ಪತ್ರ ಪರಿಗಣನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್