ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆಟೋ ಚಾಲಕರ 'ಡಿಸ್ ಪ್ಲೇ ಕಾರ್ಡ್' ಪ್ರದರ್ಶನ ಕಡ್ಡಾಯ; ಮತ್ತೆ ಕಟ್ಟುನಿಟ್ಟಾಗಿ ಜಾರಿ!

ನಗರ ಸಂಚಾರ ಪೊಲೀಸರು ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದ್ದಾರೆ. ಆಟೋರಿಕ್ಷಾಗಳಲ್ಲಿ ಡಿಸ್ ಪ್ಲೇ ಕಾರ್ಡ್ ಪ್ರದರ್ಶನ ಕಡ್ಡಾಯವಾಗಿದೆ.

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವಿನ ಗಲಾಟೆ ನಿತ್ಯ ಎಂಬಂತಾಗಿದೆ. ಚಾಲಕರು ಸಾರ್ವಜನಿಕರಿಂದ ನಿಗದಿಗಿಂತ ಅಧಿಕ ಪ್ರಯಾಣ ದರ ವಸೂಲಿ, ಕರೆದ ಜಾಗಕ್ಕೆ ಬಾರದೆ ಉದ್ಧಟತನಿಂದ ವರ್ತಿಸುತ್ತಿದ್ದಾರೆ.

ಈ ವಿಚಾರವಾಗಿ ಸಾಕಷ್ಟು ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದ್ದಾರೆ. ಆಟೋರಿಕ್ಷಾಗಳಲ್ಲಿ ಡಿಸ್ ಪ್ಲೇ ಕಾರ್ಡ್ ಪ್ರದರ್ಶನ ಕಡ್ಡಾಯವಾಗಿದೆ.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ, ಇತ್ತೀಚೆಗೆ ಹೊರಡಿಸಿದ ಸುತ್ತೋಲೆಯಲ್ಲಿ ಆಟೋ ರಿಕ್ಷಾ ಚಾಲಕರು ತಮ್ಮ ಭಾವಚಿತ್ರಗಳನ್ನು ಒಳಗೊಂಡ ಡಿಸ್ ಪ್ಲೇ ಕಾರ್ಡ್ ಪ್ರದರ್ಶನ ಮಾಡುವುದು ಕಡ್ಡಾಯವಾಗಿದೆ. ಡಿಸ್ ಪ್ಲೇ ಅಳವಡಿಸದೇ ಇರುವ ಆಟೋ ಚಾಲಕರ ವಿರುದ್ಧ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಆಟೋ ಡ್ರೈವರ್ ಗಳು ಸಮವಸ್ತ್ರ ಧರಿಸದಿರುವುದು, ದುಬಾರಿ ದರಗಳು, ಬಾಡಿಗೆಗೆ ಹೋಗಲು ನಿರಾಕರಣೆ ಮತ್ತು ಡಿಸ್ ಪ್ಲೇ ಕಾರ್ಡ್ ಪ್ರದರ್ಶನ ಮಾಡದ ದೂರುಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ವಿಶೇಷವಾಗಿ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಭಾವವನ್ನು ಸೃಷ್ಟಿಸುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಈ ನಿಯಮ ಹೊಸದಲ್ಲ, ಆದರೆ ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈಗ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಾರ್ತಿಕ್ ರೆಡ್ಡಿ ಹೇಳಿದ್ದಾರೆ. ಇತರ ಜಿಲ್ಲೆಗಳ ನಿರ್ವಾಹಕರು ಸೇರಿದಂತೆ ಪರ್ಮಿಟ್‌ಗಳಿಲ್ಲದ ಆಟೋಗಳ ಕಾರ್ಯಾಚರಣೆಯನ್ನು ತಡೆಯಲು ಈ ಕ್ರಮ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

ಹೊಸ ಕಾರ್ಡ್ ಗಳ QR ಕೋಡ್ ಗಳ ಮೂಲಕ ASTraM ಆ್ಯಪ್ ನಲ್ಲಿ ಚಾಲಕನ ವಿವರಗಳನ್ನು ಪರಿಶೀಲಿಸಬಹುದು. ಇದು ಹೊಣೆಗಾರಿಕೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಬಲಪಡಿಸುತ್ತದೆ. 2025 ರಲ್ಲಿ BTP ಬಾಡಿಗೆಗೆ ಹೋಗಲು ನಿರಾಕರಿಸಿದ್ದಕ್ಕಾಗಿ 4,669 ಪ್ರಕರಣಗಳು ಮತ್ತು ದುಬಾರಿ ಶುಲ್ಕ ಕೇಳಿದ್ದಕ್ಕೆ 4,023 ಪ್ರಕರಣಗಳನ್ನು ದಾಖಲಿಸಿತ್ತು ಎಂದು ಹೇಳಿದರು. ಆದರೆ, ಉಚಿತವಾಗಿ ನೀಡಬೇಕಾದ ಡಿಸ್ಪ್ಲೇ ಕಾರ್ಡ್‌ಗಳಿಗೆ ಹಣ ನೀಡುವಂತೆ ಕೆಲವರು ಕೇಳುತ್ತಾರೆ ಎಂದು ಅನೇಕ ಆಟೋ ಚಾಲಕರು ಆರೋಪಿಸಿದರು.

ಆಟೋರಿಕ್ಷಾ ಚಾಲಕರ ಒಕ್ಕೂಟದ (ಎಆರ್‌ಡಿಯು) ಪ್ರಧಾನ ಕಾರ್ಯದರ್ಶಿ ಡಿ.ರುದ್ರಮೂರ್ತಿ ಮಾತನಾಡಿ, ಯಾವುದೇ ಶುಲ್ಕವನ್ನು ಸಂಗ್ರಹಿಸುವಂತಿಲ್ಲ. ಯಾರಾದರೂ ಹಣ ವಸೂಲಿ ಮಾಡುತ್ತಿದ್ದರೆ ಚಾಲಕರು ದೂರು ದಾಖಲಿಸಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

SCROLL FOR NEXT