ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು 
ರಾಜ್ಯ

ಬೆಂಗಳೂರು: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ; Video

ಗುರುವಾರ ರಾತ್ರಿ ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಐಶಾರಾಮಿ ಕಾರು ವಿಭಜಕಕ್ಕೆ ಢಿಕ್ಕಿಯಾಗಿ ಮೇಲಕ್ಕೆ ಹಾರಿ ರೆಸ್ಟೋರೆಂಟ್ ಗೋಡೆಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಐಶಾರಾಮಿ ಕಾರು ಅಪಘಾತ ಸಂಭವಿಸಿದ್ದು, ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗುರುವಾರ ರಾತ್ರಿ ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಐಶಾರಾಮಿ ಕಾರು ವಿಭಜಕಕ್ಕೆ ಢಿಕ್ಕಿಯಾಗಿ ಮೇಲಕ್ಕೆ ಹಾರಿ ರೆಸ್ಟೋರೆಂಟ್ ಗೋಡೆಗೆ ಡಿಕ್ಕಿ ಹೊಡೆದಿದೆ.

ಇದೇ ಸಂದರ್ಭದಲ್ಲಿ ಅದೇ ಜಾಗದಲ್ಲಿ ಹಲವರು ನಿಂತಿದ್ದರು. ಆದರೆ ಪವಾಡ ಸದೃಶರಾಗಿ ಎಲ್ಲರೂ ಪಾರಾಗಿದ್ದಾರೆ. ಆ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದೆ.

ರಾತ್ರಿ 11.35 ರ ಸುಮಾರಿಗೆ ಈ ಘಟನೆ ನಡೆದಿದ್ದು, ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ಸ್ಕೋಡಾ ಮಾದರಿಯ ಕಾರನ್ನು 42 ವರ್ಷದ ಡೆರಿಕ್ ಟೋನಿ ಎಂಬುವವರು ಚಲಾಯಿಸುತ್ತಿದ್ದರು.

ಟೋನಿ 18 ನೇ ಮುಖ್ಯ ರಸ್ತೆಯಿಂದ 100 ಅಡಿ ರಸ್ತೆಯ ಕಡೆಗೆ ಪ್ರಯಾಣಿಸುತ್ತಿದ್ದರು. ಮದ್ಯದ ಅಮಲಿನಲ್ಲಿದ್ದ ಟೋನಿ ಅತಿ ವೇಗದಲ್ಲಿ ಕಾರು ಚಾಲನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಗಿದ್ದೇನು?

ಟೋನಿ ಎಡ ತಿರುವು ಪಡೆಯಲು ವಿಫಲರಾಗಿದ್ದು, ಈ ವೇಳೆ ಕಾರು ನೇರವಾಗಿ ವಿಭಜಕಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಗಾಳಿಯಲ್ಲಿ ಮೇಲಕ್ಕೆ ಹಾರಿದ್ದು, ಬಳಿಕ ಕೆಳಗೆ ಬಿದ್ದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಬಾರ್ಬೆಕ್ಯೂ ನೇಷನ್‌ ಅಂಗಡಿಗೆ ಡಿಕ್ಕಿ ಹೊಡೆದು ರೆಸ್ಟೋರೆಂಟ್‌ನ ಗೋಡೆಗೆ ಗುದ್ದಿದೆ.

ವೈರಲ್ ಆಗಿರುವ 10 ಸೆಕೆಂಡ್ ಗಳ ವಿಡಿಯೋದಲ್ಲಿ ಭೋಜನ ಮುಗಿಸಿದ ಜನರ ಗುಂಪು ಅದೇ ಹೋಟೆಲ್ ಹೊರಗೆ ನಿಂತಿತ್ತು. ಅದೇ ಸಂದರ್ಭದಲ್ಲಿ ಈ ಕಾರು ಅತಿ ವೇಗದಲ್ಲಿ ಬಂದು, ವಿಭಜಕಕ್ಕೆ ಢಿಕ್ಕಿಯಾಗಿ ಮೇಲಕ್ಕೆ ಹಾರಿ, ಪಾದಚಾರಿಗಳಿಂದ ಕೂದಲೆಳೆ ಅಂತರದಿಂದ ಸಾಗಿ ರೆಸ್ಟೋರೆಂಟ್ ಗೋಡೆಗೆ ಡಿಕ್ಕಿ ಹೊಡೆದಿರುವುದು ದಾಖಲಾಗಿದೆ.

ಸಾವು ಸಂಭವಿಸಿಲ್ಲ

ಭೀಕರ ಅಪಘಾತದ ಹೊರತಾಗಿಯೂ ಅಪಘಾತದಲ್ಲಿ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ. ರೆಸ್ಟೋರೆಂಟ್ ಹೊರಗೆ ನಿಂತಿದ್ದ ಜನರ ಗುಂಪು ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶ ಪಾರಾಗಿದ್ದು, ದ್ವಿಚಕ್ರ ವಾಹನದ ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುವನ್ನು ಜಬೀರ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಈ ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT