ಮನೆ ಕಟ್ಟಲು ಪಾಯ ಅಗೆಯುವಾಗ ಸಿಕ್ಕಿದ ಚಿನ್ನ  
ರಾಜ್ಯ

ಗದಗ: ಲಕ್ಕುಂಡಿಯಲ್ಲಿ ಮನೆಯ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆ; ಪ್ರಾಮಾಣಿಕತೆ ಮೆರೆದ 8ನೇ ತರಗತಿ ಬಾಲಕ

ಮಾಹಿತಿ ಪಡೆದ ಕೂಡಲೇ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮೌಲ್ಯಮಾಪಕರು ಸ್ಥಳಕ್ಕೆ ಆಗಮಿಸಿ ಪಾತ್ರೆಯಲ್ಲಿ 22 ವಸ್ತುಗಳು ಇದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗದಗ ಎಸ್ಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.

ಗದಗ ಜಿಲ್ಲೆಯ ಐತಿಹಾಸಿಕ ಸ್ಥಳ ಲಕ್ಕುಂಡಿಯಲ್ಲಿ ಮನೆ ಕಟ್ಟಲು ಅಗೆಯುವಾಗ ಚಿನ್ನ ಪತ್ತೆಯಾಗಿದೆ. ಲಕ್ಕುಂಡಿ ಗ್ರಾಮದಲ್ಲಿ ನಿನ್ನೆ ಮನೆ ಕಟ್ಟಲು ಕಟ್ಟಡ ಕಾರ್ಮಿಕರು ಭೂಮಿ ಅಗೆಯುವಾಗ ಚಿನ್ನ ಸಿಕ್ಕಿದೆ.

ಸರಕಾರವು ಹಾರ ಮತ್ತು ಕಿವಿಯೋಲೆಗಳು ಸೇರಿದಂತೆ ವಿವಿಧ ರೀತಿಯ ಆಭರಣಗಳನ್ನು ಒಳಗೊಂಡ 470 ಗ್ರಾಂ ಚಿನ್ನವನ್ನು ಪಡೆದುಕೊಂಡಿದೆ. ಎಂಟನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ರಿತ್ವಿಕ್ ತಾಮ್ರದ ಪಾತ್ರೆಯಲ್ಲಿ ಆಭರಣಗಳನ್ನು ಗುರುತಿಸಿದ್ದಾನೆ. ಆ ಬಾಲಕ ಗ್ರಾಮದ ಹಿರಿಯ ಸದಸ್ಯರಿಗೆ ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದಾನೆ.

ಮಾಹಿತಿ ಪಡೆದ ಕೂಡಲೇ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮೌಲ್ಯಮಾಪಕರು ಸ್ಥಳಕ್ಕೆ ಆಗಮಿಸಿ ಪಾತ್ರೆಯಲ್ಲಿ 22 ವಸ್ತುಗಳು ಇದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗದಗ ಎಸ್ಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.

ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ ಅವರನ್ನು ಸನ್ಮಾನಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮತ್ತು ಅಬಕಾರಿ ಜಿಲ್ಲಾಧಿಕಾರಿ ಶ್ರೀ ದುರ್ಗೇಶ್ ಅವರು ಪ್ರಜ್ವಲ್‌ಗೆ ಶಾಲು ಹಾಕಿ ಗೌರವಿಸಿದ್ದು,  ವಿಷಯವನ್ನು ಸರ್ಕಾರದ ಗಮನಕ್ಕೆ ತಂದ ಗ್ರಾಮ ಪಂಚಾಯತ್ ಸದಸ್ಯೆ ರಜಿಯಾ ಬೇಗಂ ಅವರಿಗೂ ಸನ್ಮಾನ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT