ರಾಜ್ಯ

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಬೆಂಗಳೂರಿನ ಆಕ್ಸ್ ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ಆರು ಪ್ರಾಧ್ಯಾಪಕರನ್ನು ಕೆಲಸದಿಂದ ವಜಾಗೊಳಿಸಿದೆ.

ಬೆಂಗಳೂರು: ಬೆಂಗಳೂರಿನ ಆಕ್ಸ್ ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ಆರು ಪ್ರಾಧ್ಯಾಪಕರನ್ನು ಕೆಲಸದಿಂದ ವಜಾಗೊಳಿಸಿದೆ. OMR ವಿಭಾಗದ ಪ್ರಾಧ್ಯಾಪಕರಾದ ಡಾ. ಸಿಂಧು, ಡಾ. ಸುಶ್ಮಿನಿ, ಡಾ. ಆಲ್ಬಾ, ಡಾ. ಅನಿಮೋಲ್, ಡಾ. ಪೈಕಾ, ಡಾ. ಶಬಾನಾ ಅವರನ್ನು ವಜಾಗೊಳಿಸಲಾಗಿದೆ. ಪ್ರಾಧ್ಯಾಪಕರ ವಿರುದ್ಧ ಎಫ್ಐಆರ್ ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಆರು ಮಂದಿ ಪ್ರಾಧ್ಯಾಪಕರನ್ನು ವಜಾ ಮಾಡಲಾಗಿದೆ.

ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಯಶಸ್ವಿನಿ ತಾಯಿ ದೂರಿನ ಮೇರೆಗೆ ಪ್ರಾಂಶುಪಾಲೆ ಪ್ರಿಯಾ ಸುಬ್ರಮಣಿ ಸೇರಿ 7 ಪ್ರಾಧ್ಯಾಪಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಜನವರಿ 8ರಂದು ಚಂದಾಪುರದ ಮನೆಯಲ್ಲಿ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದರು. ಯಶಸ್ವಿನಿ ಆತ್ಮಹತ್ಯೆಗೆ ಕಾಲೇಜು ಪ್ರಾಧ್ಯಾಪಕರ ಕಿರುಕುಳ ಎಂದು ಆರೋಪಿಸಲಾಗಿತ್ತು. ಸಹಪಾಠಿಗಳ ಮುಂದೆ ಯಶಸ್ವಿನಿಯ ಮೈಬಣ್ಣ ಮತ್ತು ಡ್ರೆಸ್ ಬಗ್ಗೆ ಪ್ರಾಧ್ಯಾಪಕರ ಟೀಕಿಸಿದ್ದರು. ಡಾ. ಪ್ರಿಯಾ ವಿರುದ್ಧವೂ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದು ಕ್ರಮಕೈಗೊಳ್ಳಲಾಗುವುದು ಎಂದು ಆಕ್ಸ್ ಫರ್ಡ್ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲ ಡಾ. ರಮೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT