ಹೈಕೋರ್ಟ್  
ರಾಜ್ಯ

ನೈಸ್ (BMIC) ಯೋಜನೆ ರದ್ದುಪಡಿಸುವ ಬಗ್ಗೆ ಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಮಾರ್ಗವನ್ನು ಭವಿಷ್ಯದಲ್ಲಿಯೂ ನಿರ್ಮಿಸುವ ಯಾವುದೇ ಸೂಚನೆ ಕಾಣಿಸುತ್ತಿಲ್ಲ. ಆದ್ದರಿಂದ, ಯೋಜನೆಯನ್ನು ಮರು ಪರಿಶೀಲಿಸಬೇಕು ಮತ್ತು ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಬೆಂಗಳೂರು: ಕಳೆದ 30 ವರ್ಷಗಳಿಂದ ಕೇವಲ ಕಾಗದದ ಮೇಲೆ ಮಾತ್ರ ಉಳಿದಿರುವ ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಕೈಬಿಡುವ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಮಾರ್ಗವನ್ನು ಭವಿಷ್ಯದಲ್ಲಿಯೂ ನಿರ್ಮಿಸುವ ಯಾವುದೇ ಸೂಚನೆ ಕಾಣಿಸುತ್ತಿಲ್ಲ. ಆದ್ದರಿಂದ, ಯೋಜನೆಯನ್ನು ಮರು ಪರಿಶೀಲಿಸಬೇಕು ಮತ್ತು ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಅಧಿಕಾರದಲ್ಲಿರುವ ಜನರು ಸಾರ್ವಜನಿಕ ಯೋಜನೆಗೆ ಬದ್ಧರಾಗಿಲ್ಲ ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆಯಾಗಿದೆ ಎಂದಿರುವ ನ್ಯಾಯಪೀಠ ಕೇವಲ ಬಾಹ್ಯ ರಸ್ತೆಗಳು ಮತ್ತು ಟೋಲ್ ಪ್ಲಾಜಾಗಳನ್ನು ನಿರ್ಮಿಸುವ ಮೂಲಕ ಭಾರಿ ಟೋಲ್‌ಗಳನ್ನು ಸಂಗ್ರಹಿಸುತ್ತಿವೆ ಎಂದು ನ್ಯಾಯಪೀಠ ಆಶ್ಚರ್ಯ ವ್ಯಕ್ತಪಡಿಸಿದೆ. ‘ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಮತ್ತು ಮೂಲಸೌಕರ್ಯ ಕಾರಿಡಾರ್ ಯೋಜನೆ ಕೇವಲ ಕಾಗದಗಳಲ್ಲಿ ಮಾತ್ರ ಉಳಿದಿದೆ. ಯೋಜನೆ ನಿರ್ಮಾಣ ಮಾಡಿ ಅದನ್ನು ಅನುಷ್ಠಾನಕ್ಕೆ ತರಬೇಕಾದವರು ಭಾರಿ ಪ್ರಮಾಣದಲ್ಲಿ ಜಮೀನನ್ನು ತಮ್ಮ ಸುಪರ್ದಿಯಲ್ಲೇ ಇಟ್ಟುಕೊಂಡಿದ್ದಾರೆ’ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಬೆಂಗಳೂರಿನ ಕೆಂಗೇರಿ ಬಳಿ 3 ಎಕರೆ 23 ಗುಂಟೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಪರಿಹಾರದ ಪೂರ್ಣ ಮತ್ತು ಅಂತಿಮ ಇತ್ಯರ್ಥಕ್ಕಾಗಿ ಪರಿಹಾರ ಬಾಂಡ್ ಅನ್ನು ಕಾರ್ಯಗತಗೊಳಿಸುವ ಮೂಲಕ 2007 ರಲ್ಲಿ ಪರಿಹಾರವನ್ನು ನೀಡುವಂತೆ ನೈಸ್ ಲಿಮಿಟೆಡ್ ಮತ್ತು ರಾಜ್ಯಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯವು ಈ ರೀತಿ ಆದೇಶ ನೀಡಿದೆ.

ಪ್ರಸ್ತಾವಿತ ಎಕ್ಸ್‌ಪ್ರೆಸ್‌–ವೇ ನಲ್ಲಿನ ಒಟ್ಟು 111 ಕಿ.ಮೀಗಳಲ್ಲಿ ಕಳೆದ 25 ವರ್ಷಗಳಲ್ಲಿ ಕೇವಲ 1 ಕಿ.ಮೀ ರಸ್ತೆ ಮಾತ್ರ ನಿರ್ಮಿಸಲಾಗಿದೆ. 1995ರಲ್ಲಿ ನಗರದ ದಟ್ಟಣೆಯನ್ನು ಕಡಿಮೆ ಮಾಡಲು ಯೋಜಿಸಲಾದ ಐದು ಪಟ್ಟಣಗಳಲ್ಲಿ ಈತನಕ ಯಾವುದೇ ಪ್ರಗತಿ ಕಂಡಿಲ್ಲ ಎಂದು ನ್ಯಾಯಪೀಠ ತೀರ್ಪಿನಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.

ಇದು 47 ಕಿ.ಮೀ. ಪೆರಿಫೆರಲ್ ರಸ್ತೆಗಳನ್ನು ನಿರ್ಮಿಸಿದೆ, ಅದರಿಂದ ಅದು ತನ್ನ ಲಾಭಕ್ಕೆ ಟೋಲ್ ತೆರಿಗೆಯನ್ನು ಸಂಗ್ರಹಿಸುತ್ತದೆ. ಆದರೆ ನಗರದ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಹೊಸ ಸ್ಯಾಟಲೈಟ್ ಪಟ್ಟಣವನ್ನು ಅಭಿವೃದ್ಧಿಪಡಿಸಲು ಸಾರ್ವಜನಿಕ ಹಿತಾಸಕ್ತಿಯ ಮಹತ್ವಾಕಾಂಕ್ಷೆಯ ಯೋಜನೆಯು ಕೇವಲ ಕಾಗದದ ಮೇಲೆ ಮಾತ್ರ ಉಳಿದಿದೆ.

ಕಳೆದ 25 ವರ್ಷಗಳಲ್ಲಿ ಒಂದೇ ಒಂದು ಪಟ್ಟಣವನ್ನು ಸಹ ಅಭಿವೃದ್ಧಿಪಡಿಸಲಾಗಿಲ್ಲ. ಇದರ ಪರಿಣಾಮವಾಗಿ, ಇಂದು ಬೆಂಗಳೂರಿನ ರಸ್ತೆಗಳಲ್ಲಿ ಪ್ರಯಾಣಿಸುವುದು ಕಷ್ಟಕರವಾಗಿದೆ ಮತ್ತು ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ನ್ಯಾಯಾಲಯ ತಿಳಿಸಿದೆ.

25 ವರ್ಷಗಳಿಗೂ ಹೆಚ್ಚು ಕಾಲ, ಕೇವಲ ಒಂದು ಕಿಲೋಮೀಟರ್ ಮಾತ್ರ ನಿರ್ಮಿಸಿರುವಾಗ, ಯೋಜನೆಯನ್ನು ಜೀವಂತವಾಗಿಡುವುದರಿಂದ ಯಾವುದೇ ಉದ್ದೇಶ ಈಡೇರುವುದಿಲ್ಲ. ನಗರ, ನಾಗರಿಕರು, ಪರಿಸರ ಮತ್ತು ಭವಿಷ್ಯದ ಹಿತದೃಷ್ಟಿಯಿಂದ, ಯೋಜನೆಯನ್ನು ಮರುಪರಿಶೀಲಿಸುವುದು ಮತ್ತು ಹಳೆಯದನ್ನು ಕೈ ಬಿಟ್ಟು ಹೊಸ ಯೋಜನೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರು ಮಹಾನಗರದ ಜನಸಂಖ್ಯೆ ಈಗ 1.40 ಕೋಟಿಗಿಂತ ಹೆಚ್ಚಾಗಿದೆ. ಸಂಚಾರ ದಟ್ಟಣೆ ಸಾಮಾನ್ಯ ಎನ್ನುವಂತಾಗಿದೆ. ನಗರದೊಳಗೆ ಸ್ವಲ್ಪ ದೂರ ಪ್ರಯಾಣಿಸಲೂ ಗಂಟೆಗಟ್ಟಲೆ ವ್ಯಯ ಮಾಡಬೇಕಾಗಿದೆ. ಮೂಲಸೌಕರ್ಯ ಅಗತ್ಯ ಸೌಲಭ್ಯಗಳು ಕುಸಿಯುತ್ತಿವೆ.

ಇದು ಪರಿಸರದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಆದ್ದರಿಂದ, ನಗರದ ಜೀವನ ಪರಿಸ್ಥಿತಿಗಳನ್ನು ಸುಧಾರಿಸಲು ರಾಜ್ಯ ಸರ್ಕಾರವು ಫ್ರೇಮ್‌ವರ್ಕ್ ಒಪ್ಪಂದವನ್ನು ಬೇಗನೆ ಕೈ ಬಿಟ್ಟು ಹೊಸ ಯೋಜನೆಗೆ ಅಗತ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಹೈಕೋರ್ಟ್ ಪೀಠವು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಷ್ಟೊಂದು ಪ್ರೀತಿ ಇದ್ದರೆ, ನಿಮ್ಮ ಮನೆಗೇಕೆ ಕರೆದೊಯ್ಯಬಾರದು?; ಶ್ವಾನ ಪ್ರಿಯರಿಗೆ ಸುಪ್ರೀಂ ಕೋರ್ಟ್ ಚಾಟಿ

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ಯುದ್ಧಕ್ಕೂ ಸಿದ್ದ-ಮಾತುಕತೆಗೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

ಟೇಕಾಫ್​ಗೆ ಸಿದ್ಧವಾಗಿದ್ದ ಪುಣೆ-ಬೆಂಗಳೂರು ಆಕಾಶ ಏರ್ ವಿಮಾನದಲ್ಲಿ ತಾಂತ್ರಿಕ ದೋಷ!

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರಿ ನೌಕರರ ತನಿಖೆಗೆ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್ ನಿಂದ ವಿಭಿನ್ನ ತೀರ್ಪು

SCROLL FOR NEXT