ಡಿ.ಕೆ ಶಿವಕುಮಾರ್ 
ರಾಜ್ಯ

ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ GBA ಚುನಾವಣೆ; ನೇರ ಹಣಾಹಣಿಗೆ ಬಿಜೆಪಿ-ಜೆಡಿಎಸ್ ಒಂದಾಗಲಿ: ಡಿ.ಕೆ ಶಿವಕುಮಾರ್

ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ.

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ಮೈದಾನ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಬೇಕು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಅನುಸಾರ ಏನೆಲ್ಲಾ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ ಎಂದು ತಿಳಿಸಿದರು.

ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಅದು ತೀರ್ಮಾನ ಮಾಡಲಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ. ಇದನ್ನು ನಾನು ಗಮನಿಸಿಲ್ಲ. ಇದನ್ನು ಪರಿಶೀಲಿಸಿ ತಪ್ಪಾಗಿದ್ದರೆ ಸರಿಪಡಿಸಲು ಅವರಿಗೆ ಸೂಚಿಸಲಾಗುವುದು. ನಾವು ಯಾವುದರಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು . ನಾವು ಯಾವುದೇ ಕಾಲಾವಕಾಶ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಚುನಾವಣೆ ನಿಮ್ಮ ಪಾಲಿಗೆ ಎಷ್ಟು ಸವಾಲಿನದ್ದಾಗಿದೆ ಎಂದು ಕೇಳಿದಾಗ, “ಏನು ಸವಾಲಿದೆ? ಚುನಾವಣೆ ನಡೆಸುವುದು ನನ್ನ ಕರ್ತವ್ಯ. ಕಾರ್ಯಕರ್ತರಿಗೆ ಅಧಿಕಾರ ಕೊಡುವು, ಹೊಸ ನಾಯಕರನ್ನು ತಯಾರು ಮಾಡುತ್ತಿದ್ದೇವೆ. ನಾವು ಮಾಡುತ್ತಿರುವ ಕೆಲಸಕ್ಕೆ ಜನ ಬೆಂಬಲ ನೀಡುವ ವಿಶ್ವಾಸವಿದೆ. ನಾವು ಐದೂ ಪಾಲಿಕೆಗಳಲ್ಲೂ ಗೆಲ್ಲುತ್ತೇವೆ ಎಂದರು.

ನೇರ ಹಣಾಹಣಿಗೆ ಬಿಜೆಪಿ- ಜೆಡಿಎಸ್ ಒಂದಾಗಬೇಕು

ಬಿಜೆಪಿ ಹಾಗೂ ಜೆಡಿಎಸ್ ಫ್ರೆಂಡ್ಲಿ ಫೈಟ್ ವಿಚಾರವಾಗಿ ಕೇಳಿದಾಗ, “ಅವರು ಏನಾದರೂ ಮಾಡಿಕೊಳ್ಳಲಿ. ಜತೆಯಾಗಿಯಾದರೂ ಚುನಾವಣೆ ಮಾಡಲಿ, ಬೇರೆಯಾಗಿ ಬೇಕಾದರೂ ಮಾಡಲಿ. ಅವರು ಸಂಸತ್ ಚುನಾವಣೆಯಲ್ಲಿ ಒಟ್ಟಿಗೆ ಚುನಾವಣೆ ಮಾಡಿದಂತೆ ವಿಧಾನಸಭೆ ಹಾಗೂ ಪಾಲಿಕೆ ಚುನಾವಣೆಯನ್ನು ಮಾಡಿದರೆ ನೇರ ಹಣಾಹಣಿ ಇರುತ್ತದೆ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ - ಜಮ್ಮು-ಕಾಶ್ಮೀರ ಸಿಎಂ

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

ಈ ರಸ್ತೆ ಮುಸ್ಲಿಮರಿಗಲ್ಲ: ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿಯರು ಬರೆಯುತ್ತಿರುವ ವಿಡಿಯೋ ವೈರಲ್!

SCROLL FOR NEXT