ರಾಜೀವ್ ಗೌಡ 
ರಾಜ್ಯ

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡ: 2 ಎಫ್ ಐಆರ್ ದಾಖಲು

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಜೆಡಿಎಸ್ ವತಿಯಿಂದ ದೂರು ನೀಡಲಾಗಿದೆ. ಹೀಗಾಗಿ 2 ಎಫ್‌ಐಆರ್‌ಗಳು ದಾಖಲಾಗಿವೆ.

ತಲೆಮರೆಸಿಕೊಂಡಿರುವ ರಾಜೀವ್ ಗೌಡ

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಜನಪ್ರತಿನಿಧಿ ಅಲ್ಲದಿದ್ದರೂ ಆಡಳಿತ ನಡೆಸಲು ಯತ್ನ ಆರೋಪ

ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಇದ್ದರೂ ಅಲ್ಲಿ ದರ್ಬಾರ್ ನಡೆಸಲು ರಾಜೀವ್ ಗೌಡ ಯತ್ನಿಸುತ್ತಿದ್ದಾರೆ. ಯಾರೇ ಅಧಿಕಾರಿಗಳು ಬಂದರೂ ತಮ್ಮ ಸಮ್ಮತಿ ಪಡೆಯುವಂತೆ ಒತ್ತಡ ಹೇರುತ್ತಿದ್ದರು. ವಿವಿಧ ಇಲಾಖೆಗಳಲ್ಲಿ ತಮ್ಮದೇ ಮಾತು ನಡೆಯಬೇಕು ಎಂದು ಒತ್ತಡ ಹೇಳುತ್ತಿದ್ದರು ಎಂಬ ಆರೋಪಗಳು ಕೂಡ ಈಗ ಕೇಳಿ ಬಂದಿವೆ.

ಏನಿದು ಗಲಾಟೆ?

ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದ್ದರಿಂದ ಸಿಟ್ಟಾಗಿದ್ದ ರಾಜೀವ್ ಗೌಡ ಪೌರಾಯುಕ್ತೆ ಅಮೃತ ಗೌಡಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲವಾಗಿ ನಿಂದಿಸಿದ್ದರು. ಈ ವಿಚಾರವಾಗಿ ಅಮೃತ ಗೌಡ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ನಂತರ, ಪೊಲೀಸರಿಗೂ ದೂರು ನೀಡಿದ್ದರು. ಈ ವಿಚಾರ ನಂತರ ತೀವ್ರ ಸ್ವರೂಪ ಪಡೆದುಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran Unrest: ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ, 'ಮರಣದಂಡನೆ ಯೋಜನೆ ಇಲ್ಲ': ಡೊನಾಲ್ಡ್ ಟ್ರಂಪ್

ಇರಾನ್‌ ನಲ್ಲಿ ಸಾವಿನ ಸಂಖ್ಯೆ 3,500ಕ್ಕೆ ಏರಿಕೆ: ಕತಾರ್‌ನಲ್ಲಿ ಅಮೆರಿಕದ ಪ್ರಮುಖ ನೆಲೆಯ ಸಿಬ್ಬಂದಿಗಳ ಸ್ಥಳಾಂತರಕ್ಕೆ ಸೂಚನೆ

ಶಿವಲಿಂಗಕ್ಕೆ ಸೂರ್ಯಾಭಿಷೇಕ: 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ, ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಆರಂಭ

ಎಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಮತ್ತೆ 'ಇರಾನ್ ದಾಳಿ' ಬೆದರಿಕೆ: ಕತಾರ್‌ನ ಅಮೆರಿಕ ಸೇನಾ ನೆಲೆಯಿಂದ ಕೆಲವು ಸಿಬ್ಬಂದಿ ಸ್ಥಳಾಂತರ!

SCROLL FOR NEXT