ಬ್ಯಾನರ್ ಗೆ ಬೆಂಕಿ ತಗುಲಿರುವ ಚಿತ್ರ 
ರಾಜ್ಯ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ!

ಚಿಕ್ಕಪೇಟೆಯಲ್ಲಿ ಈ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ಇತ್ತು.

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸುವ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿದ ಪರಿಣಾಮ ಬ್ಯಾನರ್ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಚಿಕ್ಕಪೇಟೆಯಲ್ಲಿ ಈ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ಇತ್ತು. ಈ ವೇಳೆ ಘಟನೆ ನಡೆದಿದೆ.

ಸಂಕ್ರಾಂತಿ ಹಬ್ಬದ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯದ ಮುಂದೆ ಹುಲ್ಲು, ಹೂ ಬ್ಯಾನರ್ ಗಳಿಂದ ಸಿಂಗಾರ ಮಾಡಲಾಗಿತ್ತು. ಪಟಾಕಿ‌ ಹಚ್ಚುವಾಗ ಬೆಂಕಿ‌ ಕಿಡಿ ಬ್ಯಾನರ್ ಗೆ ಹಾಕಿದ್ದ ಹುಲ್ಲಿಗೆ ಬಿದ್ದು ಅವಘಡ ಸಂಭವಿಸಿದೆ.

ದೇವರ ದರ್ಶನ‌ ಪಡೆಯಲು ವೃದ್ಧರು, ಮಕ್ಕಳು, ಮಹಿಳೆಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು. ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಬೆಂಕಿಯ ಪ್ರಮಾಣ ಹೆಚ್ಚಾಗಿದ್ದರೆ ದೊಡ್ಡ ದುರಂತ ಸಂಭವಿಸುತ್ತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Jammu-Kashmir: ಮತ್ತೆ ಕತ್ತಲಲ್ಲಿ 'ಗಡಿಯತ್ತ ನುಗಿದ್ದ ಡ್ರೋನ್' ಗಳು, ಐದು ದಿನಗಳಲ್ಲಿ ಮೂರನೇ ಬಾರಿಗೆ ಪತ್ತೆ!

Op Sindoor ವೇಳೆ 'ಉಗ್ರರ ಹೆಡ್ ಆಫೀಸ್' ಸಂಪೂರ್ಣ ಧ್ವಂಸ: ಸತ್ಯ ಒಪ್ಪಿಕೊಂಡ ಲಷ್ಕರ್ ಕಮಾಂಡರ್! ಮತ್ತೆ ಪಾಕ್ ಮುಖವಾಡ ಬಯಲು!

BMC Exit polls: ಮತಗಟ್ಟೆ ಸಮೀಕ್ಷೆ ಪ್ರಕಟ! ಯಾರಿಗೆ ಎಷ್ಟು ಸ್ಥಾನ?

'ಬೆಟ್ಟಿಂಗ್ ಆ್ಯಪ್, ಸಾಲಗಾರರ ಕಾಟ, ತಂಗಿ ನಾಪತ್ತೆ'; ನಟಿ ಕಾರುಣ್ಯ ರಾಮ್ ಕಣ್ಣೀರು! ಸರಣಿ ಪೋಸ್ಟ್! Video

T20 World Cup: ಬಾಂಗ್ಲಾದೇಶದ ಪಂದ್ಯಗಳ ಸ್ಥಳಾಂತರದ ವದಂತಿ; BCCI ಹೇಳಿದ್ದೇನು?

SCROLL FOR NEXT