ಗವಿಗಂಗಾಧರೇಶ್ವರ  
ರಾಜ್ಯ

ಶಿವಲಿಂಗಕ್ಕೆ ಸೂರ್ಯಾಭಿಷೇಕ: ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ

ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ.

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಗುರುವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ.

ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ.

ಗವಿಗಂಗಾಧರೇಶ್ವ ಸ್ವಾಮಿ ದೇಗುಲ 16ನೇ ಶತಮಾನದ ಕೆಂಪೇಗೌಡರ ಕಾಲದ್ದಾಗಿದ್ದು, ದೇಗುಲದಲ್ಲಿ ಸಾಕಷ್ಟು ಕೌತುಕಗಳು ಅಡಗಿವೆ ಎಂದು ಹೇಳಲಾಗುತ್ತದೆ.

ಮಕರ ಸಂಕ್ರಾಂತಿಯ ದಿನದಂದು ಸೂರ್ಯನ ಕಿರಣಗಳು ನಂದಿಯ ತಲೆಯ ಮಧ್ಯಭಾಗದ ಮೂಲಕ ಹಾದು ಗುಹೆಯೊಳಗಿರುವ ಶಿವಲಿಂಗದ ತಳಭಾಗವನ್ನು ಮೊದಲು ಸ್ಪರ್ಶಿಸುತ್ತದೆ. ನಂತರ ಸ್ವಲ್ಪ ಸ್ವಲ್ಪವಾಗಿ ಮೇಲೆ ಸಾಗುತ್ತ ಸುಮಾರು 1 ಗಂಟೆಗಳ ಕಾಲ ಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ ಮಾಡುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ಬಿಗ್ ರಿಲೀಫ್, ದೆಹಲಿ ನ್ಯಾಯಾಲಯದಿಂದ ಖುಲಾಸೆ..!

'ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’: ಭಾರತ-ಅಫ್ಘಾನ್ ಗೆಳತನಕ್ಕೆ Pak ಅಸೂಯೆ, Quran ಉಲ್ಲೇಖಿಸಿ ವಿಷ ಕಾರಿದ ಸೇನಾ ವಕ್ತಾರ..!

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಮಹಾರಾಷ್ಟ್ರ: ಇಬ್ಬರಿಂದ ಪಾದ ತೊಳೆಸಿಕೊಂಡ ಕೈ ನಾಯಕ ನಾನಾ ಪಟೋಲೆ! Video ವೈರಲ್, ಇದೇ ಕಾಂಗ್ರೆಸ್ ಸಂಸ್ಕೃತಿ ಎಂದ ಬಿಜೆಪಿ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ 'Cooling period' ಜಾರಿ