ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷ ಸಿದ್ದರಾಮನಂದ ಸ್ವಾಮೀಜಿ 
ರಾಜ್ಯ

ರಾಯಚೂರು: ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ

ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಸಿದ್ದರಾಮನಂದ ಸ್ವಾಮೀಜಿ ಮೊನ್ನೆ 12, 13 ಮತ್ತು 14ರಂದು ನಡೆದ ಹಾಲುಮತ ಉತ್ಸವ ಕಾರ್ಯಕ್ರಮಗಳನ್ನು ಅವರು ಸ್ವತಃ ನಡೆಸಿಕೊಟ್ಟಿದ್ದರು.

ರಾಯಚೂರು: ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49ವ) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ. ನಸುಕಿನ ಜಾವ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು.

ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಸಿದ್ದರಾಮನಂದ ಸ್ವಾಮೀಜಿ ಮೊನ್ನೆ 12, 13 ಮತ್ತು 14ರಂದು ನಡೆದ ಹಾಲುಮತ ಉತ್ಸವ ಕಾರ್ಯಕ್ರಮಗಳನ್ನು ಸ್ವತಃ ನಡೆಸಿಕೊಟ್ಟಿದ್ದರು.

ಕಳೆದ 2023 ಮತ್ತು 2024ರಲ್ಲಿ ಇದೇ ಮಠದ ಉತ್ಸವಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಎಲ್ಲಾ ರಾಜಕೀಯ ಪಕ್ಷಗಳ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.

ಸಿದ್ದರಾಮನಂದ ಸ್ವಾಮೀಜಿಗಳ ಅಕಾಲಿಕ ನಿಧನದಿಂದ ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ತಿಂಥಣಿಯ ಕನಕ ಗುರುಪೀಠದಲ್ಲಿಯೇ ನಡೆಸಲಾಗುವುದು. ಹಾಲುಮತದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಭಕ್ತರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!