ಆಯಿಲ್ ಸಂಗ್ರಹಿಸಲು ಸೇರಿದ ಜನರು  
ರಾಜ್ಯ

ಬಳ್ಳಾರಿಯ ಕಂಪ್ಲಿ ಬಳಿ ಪಾಮ್ ಆಯಿಲ್ ಟ್ಯಾಂಕರ್ ಪಲ್ಟಿ: ಎಣ್ಣೆ ಸಂಗ್ರಹಿಸಲು ಮುಗಿಬಿದ್ದ ಜನರು

ದೇವಲಾಪುರ ಕಣಿವೆ ಬಳಿ ಇರುವ ತೀವ್ರ ತಿರುವಿನಲ್ಲಿ ಲಾರಿ ವೇಗ ನಿಯಂತ್ರಣ ತಪ್ಪಿದ್ದು, ಏಕಾಏಕಿ ರಸ್ತೆ ಬದಿಗೆ ಉರುಳಿಬಿದ್ದಿದೆ.

ಬಳ್ಳಾರಿ: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಲಾರಿಯಲ್ಲಿದ್ದ ಎಣ್ಣೆ ರಸ್ತೆ ಮೇಲೆಲ್ಲಾ ಸೋರಿಕೆಯಾದ ಘಟನೆ ಬಳ್ಳಾರಿಯ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ದೇವಲಾಪುರ ಕಣಿವೆ ಮಾರೆಮ್ಮ ದೇವಸ್ಥಾನದ ಸಮೀಪ ಇಂದು ನಡೆದಿದೆ. ಘಟನೆಯ ವೇಳೆ ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದರೂ, ಅದೃಷ್ಟವಶಾತ್ ಪ್ರಾಣಾಪಾಯವಾಗದೆ ಪಾರಾಗಿದ್ದಾರೆ.

ರಸ್ತೆ ತಿರುವಿನಲ್ಲಿ ಲಾರಿ ಉರುಳಿ ಬಿದ್ದದ್ದು ಹೇಗೆ?

ದೇವಲಾಪುರ ಕಣಿವೆ ಬಳಿ ಇರುವ ತೀವ್ರ ತಿರುವಿನಲ್ಲಿ ಲಾರಿ ವೇಗ ನಿಯಂತ್ರಣ ತಪ್ಪಿದ್ದು, ಏಕಾಏಕಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್‌ಗೆ ಹಾನಿಯಾಗಿದ್ದು, ಅದರೊಳಗಿದ್ದ ಪಾಮ್ ಆಯಿಲ್ ರಸ್ತೆ ಹಾಗೂ ಪಕ್ಕದ ಜಾಗಗಳಿಗೆ ಹರಿದುಹೋಗಿದೆ.

ಸೋರಿಕೆಯಾದ ಆಯಿಲ್ ಸಂಗ್ರಹಕ್ಕೆ ಜನರ ಮುಗಿಬಿದ್ದಾಟ

ಲಾರಿಯಿಂದ ಎಣ್ಣೆ ಸೋರಿಕೆಯಾದ ಸುದ್ದಿ ಸುತ್ತಮುತ್ತಲಿನ ಗ್ರಾಮಗಳಿಗೆ ಹರಡುತ್ತಿದ್ದಂತೆ, ಪುರುಷರು, ಮಹಿಳೆಯರು, ಮಕ್ಕಳು ಬಕೆಟ್‌, ಪ್ಲಾಸ್ಟಿಕ್ ಬಿಂದಿಗೆ, ಡಬ್ಬ ವಿವಿಧ ಪಾತ್ರೆಗಳನ್ನು ಹಿಡಿದು ಸ್ಥಳಕ್ಕೆ ಧಾವಿಸಿದರು. ರಸ್ತೆ ಮೇಲೆ ಹರಿದಿದ್ದ ಪಾಮ್ ಆಯಿಲ್ ನ್ನು ಸಂಗ್ರಹಿಸಿಕೊಳ್ಳಲು ಜನರು ಮುಗಿಬಿದ್ದರು.

ಸ್ಥಳಕ್ಕೆ ಧಾವಿಸಿದ ಪೊಲೀಸರು

ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ರಸ್ತೆ ಮೇಲೆ ಜನಸಂದಣಿ ಹೆಚ್ಚಾದ ಕಾರಣ ವಾಹನ ಸಂಚಾರವೂ ಕೆಲಕಾಲ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕ ಸುರಕ್ಷತೆ ಹಾಗೂ ಅಪಘಾತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸರು ಕೈಗೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

BMC ಚುನಾವಣಾ ಫಲಿತಾಂಶ: ಬಿಜೆಪಿ ಮೈತ್ರಿಕೂಟಕ್ಕೆ 128 ಸ್ಥಾನಗಳಲ್ಲಿ ಮುನ್ನಡೆ; ಮಹಾಯುತಿಯ ಹಿಡಿತಕ್ಕೆ ಮುಂಬೈ, ಪುಣೆ, ನಾಗ್ಪುರ

ಲಾತೂರ್‌ನಲ್ಲಿ ಕಾಂಗ್ರೆಸ್ ಗೆಲುವು; ವಿಲಾಸ್‌ರಾವ್ ದೇಶಮುಖ್ ನೆನಪು ಅಳಿಸುತ್ತೇವೆ ಎಂದಿದ್ದ ಬಿಜೆಪಿಗೆ ಮುಖಭಂಗ

ಕನಕಪುರ ಏಕೆ ಗಬ್ಬೆದ್ದು ನಾರುತ್ತಿದೆ? ತ್ಯಾಜ್ಯ ವಿಲೇವಾರಿಯಾಕಿಲ್ಲ: ಉಪ ಲೋಕಾಯುಕ್ತರ ಮಹತ್ವದ ಸೂಚನೆ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದರೆ ವಲಸಿಗರಿಗೆ ಹಿಂಸೆ: ಮಮತಾ ಬ್ಯಾನರ್ಜಿ

BMC Election: ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಪ್ರಚಂಡ ಗೆಲುವು!

SCROLL FOR NEXT