ಅಮಾನತು (ಸಾಂಕೇತಿಕ ಚಿತ್ರ) online desk
ರಾಜ್ಯ

ಕಾರವಾರ: ರಿಶೇಲ್ ಆತ್ಮಹತ್ಯೆ ಪ್ರಕರಣ; ಕದ್ರಾ PSI ಅಮಾನತು

ರೀನಾ ಹಾಗೂ ಕ್ರೀಸ್ತೋದ್ ಡಿಸೋಜಾ ದಂಪತಿಯ ಪುತ್ರಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಕಾರವಾರ: ಕದ್ರಾ ಯುವತಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಕಾರವಾರ ತಾಲೂಕಿನ ಕದ್ರಾ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ರೀನಾ ಹಾಗೂ ಕ್ರೀಸ್ತೋದ್ ಡಿಸೋಜಾ ದಂಪತಿಯ ಪುತ್ರಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಪ್ರಕರಣದ ಪ್ರಾಥಮಿಕ ಹಂತದಲ್ಲೇ ಅಗತ್ಯ ಕ್ರಮ ಕೈಗೊಳ್ಳದೆ, ಆರೋಪಿಯನ್ನು ಬಂಧಿಸಲು ವಿಫಲರಾದ ಆರೋಪದಡಿ ಕದ್ರಾ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅಮಾನತಾಗಿದ್ದಾರೆ.

ರಿಶೇಲ್ ಕುಟುಂಬಸ್ಥರು ಹಾಗೂ ಸಮುದಾಯದ ಜನರು ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಸಮುದಾಯ ಹಾಗೂ ರಾಜಕೀಯ ಒತ್ತಡದ ಹಿನ್ನೆಲೆ ಕದ್ರಾ ಪಿಎಸ್‌ಐ ಸಸ್ಪೆಂಡ್ ಆಗಿದ್ದಾರೆ.

ಜೆಡಿಎಸ್ ಮುಖಂಡೆಯೊಬ್ಬರ ಪುತ್ರ ಚಿರಾಗ್ ಕಾಟದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಮಾಡಲಾಗಿತ್ತು. ಪ್ರೀತಿಸುವಂತೆ ಕಾಟ ನೀಡಿದ್ದಲ್ಲದೇ ಯುವತಿಯನ್ನು ರೇಪ್ ಮಾಡಿದ್ದಾರೆಂದು ಆರೋಪಿಸಿ ಯುವತಿ ಕುಟುಂಬ ದೂರು ನೀಡಿತ್ತು. ಅತ್ಯಾಚಾರವಾಗಿರೋ ಸಂಶಯದ ಮೇರೆಗೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲು ಪೋಷಕರು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

SCROLL FOR NEXT