ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಬಿಜೆಪಿ ಟೀಕೆ ಬೆನ್ನಲ್ಲೇ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿ.ಕೆ ಶಿವಕುಮಾರ್; ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿ!

ವಿಶ್ವ ಆರ್ಥಿಕ ಶೃಂಗಸಭೆ ನಡೆಯುತ್ತಿರುವ ದಾವೋಸ್‌ಗೆ ತಮ್ಮ ಅಧಿಕೃತ ಪ್ರವಾಸವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು: ವಿಶ್ವ ಆರ್ಥಿಕ ಶೃಂಗಸಭೆ ನಡೆಯುತ್ತಿರುವ ದಾವೋಸ್‌ಗೆ ತಮ್ಮ ಅಧಿಕೃತ ಪ್ರವಾಸವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ನಾಳೆ ಡಿಕೆ ಶಿವಕುಮಾರ್ ದಾವೋಸ್‌ಗೆ ತೆರಳುವ ಸಾಧ್ಯತೆಯಿದೆ.

ಹೈಕಮಾಂಡ್ ನನಗೆ ಅನುಮತಿ ನೀಡಿದೆ. ಸಿಎಂ ಕೂಡ ಅಲ್ಲಿಗೆ ಹೋಗಲು ಕೇಳಿಕೊಂಡಿದ್ದಾರೆ. ನಾನು ದಾವೋಸ್‌ ಶೃಂಗಸಭೆಯಲ್ಲಿ ಭಾಗವಹಿಸಬೇಕೆಂದು ನನಗೆ ಕರೆಗಳು ಬರುತ್ತಿವೆ. ಆದ್ದರಿಂದ ನಾನು ಅಲ್ಲಿಗೆ ಹೋಗುವುದನ್ನು ಒಂದು ಉದ್ದೇಶವಾಗಿಟ್ಟುಕೊಂಡಿದ್ದೇನೆ. ನನ್ನ ವಿರೋಧ ಪಕ್ಷದ ಸ್ನೇಹಿತರು ಸಹ ನನಗೆ ಸಲಹೆ ನೀಡುತ್ತಿದ್ದಾರೆ. ಕೆಲವೊಮ್ಮೆ, ನಾವು ವಿರೋಧ ಪಕ್ಷದ ನಾಯಕರ ಸಲಹೆಯನ್ನು ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯದ ಹಿತದೃಷ್ಟಿಯಿಂದ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು.

ದೆಹಲಿ ಮತ್ತು ಬೆಂಗಳೂರಿನಲ್ಲಿ ಅಧಿಕೃತ ಮತ್ತು ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ (ಡಬ್ಲ್ಯೂಇಎಫ್) ಶಿವಕುಮಾರ್ ತಮ್ಮ ನಿಗದಿತ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ಡಿಸಿಎಂ ಕಚೇರಿ ಕಳೆದ ಶನಿವಾರ ತಿಳಿಸಿತ್ತು. ದಾವೋಸ್ ಭೇಟಿಯನ್ನು ರದ್ದುಗೊಳಿಸಿದ್ದಕ್ಕಾಗಿ ಶಿವಕುಮಾರ್ ಅವರನ್ನು ಪ್ರತಿಪಕ್ಷ ಬಿಜೆಪಿ ಟೀಕಿಸಿದ್ದು, ರಾಜ್ಯಕ್ಕೆ ಅಭಿವೃದ್ಧಿ ಮತ್ತು ಆರ್ಥಿಕ ಪುನರುಜ್ಜೀವನದ ಅಗತ್ಯವಿರುವ ಸಮಯದಲ್ಲಿ, ನವದೆಹಲಿ ಮತ್ತು ಬೆಂಗಳೂರಿನಲ್ಲಿ ತುರ್ತು ಮಾತುಕತೆಗಳನ್ನು ಉಲ್ಲೇಖಿಸಿ ಉಪಮುಖ್ಯಮಂತ್ರಿ ಅವರು ಈ ನಿರ್ಣಾಯಕ ಜಾಗತಿಕ ವೇದಿಕೆಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕಾಂಗ್ರೆಸ್ ಗೆ ಕಗ್ಗಂಟಾಗಿದೆ. ಡಿಸಿಎಂ ಬೆಂಬಲಿಗರು ಸಂಕ್ರಾಂತಿಯ ನಂತರ ನಾಯಕತ್ವ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಈಗ ಅಧಿಕಾರಕ್ಕಾಗಿ ಈ ಆಂತರಿಕ ಹಗ್ಗಜಗ್ಗಾಟದ ಮೊದಲ ಬಲಿಪಶು ದಾವೋಸ್ ಆಗಿರುವಂತೆ ತೋರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದರು. ಏತನ್ಮಧ್ಯೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್ ನೇತೃತ್ವದ ರಾಜ್ಯ ಸರ್ಕಾರದ ನಿಯೋಗವು ಜನವರಿ 19 ರಿಂದ 23 ರವರೆಗೆ ನಡೆಯಲಿರುವ WEF ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಭಾನುವಾರ ದಾವೋಸ್‌ಗೆ ತೆರಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ