ಮೀನು ಸತ್ತಿರುವುದು. 
ರಾಜ್ಯ

ಬೆಂಗಳೂರು: ಹಾರೋಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ಮಾಲಿನ್ಯ ಕುರಿತು ಕಳವಳ

ಕೆರೆಯ ದಡದಲ್ಲಿ ಸುಮಾರು 12ಕ್ಕೂ ಹೆಚ್ಚು ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಒಂದೇ ಜಾತಿಗೆ ಸೇರಿದ 12-18 ಇಂಚು ಉದ್ದದ ಮೀನುಗಳು ಸತ್ತಿರುವುದು ಕಂಡು ಬಂದಿದೆ.

ಬೆಂಗಳೂರು: ಯಲಹಂಕದ ಹಾರೋಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮವಾಗಿದ್ದು, ಇದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಕೆರೆಯ ದಡದಲ್ಲಿ ಸುಮಾರು 12ಕ್ಕೂ ಹೆಚ್ಚು ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಒಂದೇ ಜಾತಿಗೆ ಸೇರಿದ 12-18 ಇಂಚು ಉದ್ದದ ಮೀನುಗಳು ಸತ್ತಿರುವುದು ಕಂಡು ಬಂದಿದೆ. ಕೆರೆಯ ನೀರಿನಲ್ಲಿ ಆಮ್ಲಜನಕದ ಮಟ್ಟ ಕಡಿಮೆಯಾಗಿರುವುದು ಅಥವಾ ಮಾಲಿನ್ಯ ಕಾರಣವಾಗಿರಬಹುದು ಎಂದು ಪರಿಸರ ಕಾರ್ಯಕರ್ತರು ಹೇಳಿದ್ದು, ಈ ಕುರಿತು ತಕ್ಷಣ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಗ್ರೀನ್ ಸರ್ಕಲ್ ಸಂಸ್ಥೆಯ ಅಧ್ಯಕ್ಷ ವಿ. ಸೆಲ್ವರಾಜನ್ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದು ಕಳವಳಕಾರಿ ಸಂಗತಿ. ಎರಡು ಸ್ಪಾಟ್-ಬಿಲ್ಲ್ಡ್ ಪೆಲಿಕನ್ ಹಕ್ಕಿಗಳೂ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇದಕ್ಕೆ ಆಮ್ಲಜನಕದ ಕೊರತೆ ಒಂದು ಕಾರಣವಾಗಿರಬಹುದಾದರೂ, ಇಂತಹ ಘಟನೆಗಳು ಮರುಮರು ಸಂಭವಿಸುತ್ತಿರುವುದರಿಂದ ಸಮೀಪದ ನಿವಾಸ ಪ್ರದೇಶಗಳಿಂದ ಒಳಚರಂಡಿ ನೀರು ಕೆರೆಗೆ ಸೇರುತ್ತಿರಬಹುದೆಂಬ ಅನುಮಾನವಿದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ ಋತುಮಾನದ ಬದಲಾವಣೆಗಳ ಸಮಯದಲ್ಲಿ ಮೀನುಗಳ ಸಾವು ಸಾಮಾನ್ಯವಾಗಿದೆ ಎಂದು ಜಿಬಿಎ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನೀರಿನಲ್ಲಿ ಆಮ್ಲಜನಕದ ಮಟ್ಟವು ಸಾಮಾನ್ಯವಾಗಿ ಬೆಳಗಿನ ಜಾವ 3 ರಿಂದ 4 ಗಂಟೆಯ ನಡುವೆ ಕಡಿಮೆಯಾಗುತ್ತದೆ, ಇದು ಕೆಲವೊಮ್ಮೆ ಮೀನುಗಳ ಸಾವಿಗೆ ಕಾರಣವಾಗುತ್ತದೆ. ಮಾಲಿನ್ಯವೇ ಕಾರಣವಾಗಿದ್ದರೆ, ಸತ್ತ ಮೀನುಗಳ ಸಂಖ್ಯೆ ಇನ್ನೂ ಹೆಚ್ಚಿರುತ್ತಿತ್ತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ಯುವ ಉದ್ಯೋಗ ಸೇತು, ವಿದ್ಯಾರ್ಥಿ ಸಹಾಯಹಸ್ತ, ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ CM ಡಿ ಕೆ ಶಿವಕುಮಾರ್ ಪ್ರಮುಖ ಘೋಷಣೆಗಳು-Video

'RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ': B L ಸಂತೋಷ್

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು