ನಟ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜೂನ್, 2026ರಲ್ಲಿ ಜಾಮೀನು, 2029ರಲ್ಲಿ ಪ್ರಕರಣದಿಂದಲೇ ಖುಲಾಸೆ: ಜ್ಯೋತಿಷಿ ಭವಿಷ್ಯ!

ರೇಣುಕಾಸ್ವಾಮಿ ಹತ್ಯೆ ಪ್ರಕರಣ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಅವರ ಗ್ಯಾಂಗ್ ಅನ್ನು ಬೆಂಬಿಡದೆ ಕಾಡುತ್ತಿದ್ದು, ಸದ್ಯಕ್ಕೆ ಈ ಕೇಸ್ ಮುಗಿಯುವಂತೆ ಕಾಣಿಸುತ್ತಿಲ್ಲ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಶೀಘ್ರದಲ್ಲೇ ಜಾಮೀನು ದೊರೆಯಲಿದೆ.. ಮಾತ್ರವಲ್ಲದೇ ಈ ಪ್ರಕರಣದಿಂದ ಇನ್ನು ಕೆಲವೇ ವರ್ಷಗಳಲ್ಲಿ ದರ್ಶನ್ ಖುಲಾಸೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಅವರ ಗ್ಯಾಂಗ್ ಅನ್ನು ಬೆಂಬಿಡದೆ ಕಾಡುತ್ತಿದ್ದು, ಸದ್ಯಕ್ಕೆ ಈ ಕೇಸ್ ಮುಗಿಯುವಂತೆ ಕಾಣಿಸುತ್ತಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್, ಪವಿತ್ರಾ ಗೌಡ ಜಮೀನು ಕ್ಯಾನ್ಸಲ್ ಆಗುತ್ತಿದ್ದಂತೆ ಈ ಪ್ರಕರಣ ಮತ್ತಷ್ಟು ಬಿಗಿಯಾಗುತ್ತಿದೆ.

ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರೂ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದರೆ. ಜಾಮೀನು ರದ್ದಾಗಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರುವಂತಾಗಿದೆ.

ಕಾನೂನು ತಜ್ಞರ ಪ್ರಕಾರ ಇನ್ನು ಆರು ತಿಂಗಳು ಈ ಜೈಲಿನಲ್ಲಿಯೇ ಇರಬೇಕಾಗಬಹುದು. ಅಲ್ಲದೇ, ವಿಚಾರಣೆ ಮುಗಿಯುವವರೆಗೂ ಜಾಮೀನು ಸಿಗುವುದು ಅನುಮಾನ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಹೀಗಾಗಿ ರೇಣುಕಾಸ್ವಾಮಿ ಕೇಸ್ ದರ್ಶನ್ ಹಾಗೂ ಅವರ ಗ್ಯಾಂಗ್‌ಗೆ ಮುಳುವಾಗಿದೆ ಅನ್ನೋದು ಅಕ್ಷರಶ: ಸತ್ಯ.

ದರ್ಶನ್ ಗೆ ಶೀಘ್ರ ಜಾಮೀನು

ಇಷ್ಟೆಲ್ಲಾ ಬೆಳವಣಿಗೆಗಳ ನಡುವೆ ನಟ ದರ್ಶನ್ ಗೆ ಶೀಘ್ರದಲ್ಲೇ ಜಾಮೀನು ದೊರೆಯಲಿದೆ ಎಂದು ಜ್ಯೋತಿಷಿಯೊಬ್ಬರು ಹೇಳಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಶಾಂತ್ ಎಂಬುವವರು, ತಮ್ಮ AstroPrashanth9 ಎಂಬ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ.

ಜ್ಯೋತಿಷಿ ಪ್ರಶಾಂತ್ ಅವರ ಪ್ರಕಾರ, ಇದೇ ಜೂನ್ 2026ರಲ್ಲಿ ನಟ ದರ್ಶನ್ ಗೆ ಜಾಮೀನು ದೊರೆಯಲಿದ್ದು, ಬಳಿಕ 2029ರಲ್ಲಿ ಅವರು ಈ ಪ್ರಕರಣದಿಂದಲೇ ಖುಲಾಸೆಯಾಗಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು ದರ್ಶನ್ ಅಭಿಮಾನಿಗಳು ಇದು ನಿಜವಾಗಲೆಂದು ಹಾರೈಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

ಬಿಜೆಪಿ ಟೀಕೆ ಬೆನ್ನಲ್ಲೇ ವಿಶ್ವ ಆರ್ಥಿಕ ಶೃಂಗಸಭೆಗಾಗಿ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿಕೆ ಶಿವಕುಮಾರ್!

ನಮ್ಮ ಸರ್ಕಾರದಲ್ಲಿ ಬಾದಾಮಿ ಅಭಿವೃದ್ಧಿ ಮುಂದುವರಿಯಲಿದೆ: ಚಾಲುಕ್ಯ ಉತ್ಸವಕ್ಕೆ ಸಿಎಂ ಚಾಲನೆ

ಗ್ಯಾಂಗ್ ರೇಪ್: 3 ವರ್ಷ ಸಾವು ಬದುಕಿನ ಹೋರಾಟದ ಬಳಿಕ ಯುವತಿ ಸಾವು; ನ್ಯಾಯಕ್ಕಾಗಿ ಬುಡಕಟ್ಟು ಸಂಘಟನೆ ಆಗ್ರಹ

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

SCROLL FOR NEXT