ಜನಾರ್ದನ ರೆಡ್ಡಿ  
ರಾಜ್ಯ

ಬಳ್ಳಾರಿ ಗಲಭೆ: ಸಿಬಿಐ ತನಿಖೆಗೆ ಸರ್ಕಾರ ಹಿಂದೇಟು, ಸಿದ್ದರಾಮಯ್ಯ ವಿರುದ್ಧ ಶಾಸಕ ಜಿ ಜನಾರ್ದನ ರೆಡ್ಡಿ ವಾಗ್ದಾಳಿ

ಬಳ್ಳಾರಿ ಪ್ರಕರಣದಲ್ಲಿ ಈಗ ಯಾಕೆ ಹಿಂಜರಿಕೆ?" ಕೊಲೆ, ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.

ಬೆಂಗಳೂರು: ಬಳ್ಳಾರಿ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹಿಂದೇಟು ಹಾಕುತ್ತಿದ್ದಾರೆ ಮತ್ತು ಅದನ್ನು ಸಿಐಡಿಗೆ ಒಪ್ಪಿಸಲು ಕಾರಣವೇನು ಎಂದು ಮಾಜಿ ಸಚಿವ, ಗಂಗಾವತಿ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಸಿದ್ದರಾಮಯ್ಯ ಅವರು ಉದ್ದೇಶಪೂರ್ವಕವಾಗಿ ವಿಷಯವನ್ನು ಬೇರೆಡೆಗೆ ತಿರುಗಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಹಿಂದೆ ಸಿಎಂ ಆಗಿದ್ದಾಗ ಏಳು ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಿದ್ದನ್ನು ನೆನಪಿಸಿದರು.

ಬಳ್ಳಾರಿ ಪ್ರಕರಣದಲ್ಲಿ ಈಗ ಯಾಕೆ ಹಿಂಜರಿಕೆ?" ಕೊಲೆ, ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.

ಇದೇ ವೇಳೆ ಬಳ್ಳಾರಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಕೈಗೊಳ್ಳಲು ಬಿ ಶ್ರೀರಾಮುಲು ಅವರಿಗೆ ಬಿಜೆಪಿ ನಾಯಕತ್ವ ಗ್ರೀನ್ ಸಿಗ್ನಲ್ ನೀಡಲಿದೆ ಎಂದು ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅವ್ಯವಹಾರ ಸೇರಿದಂತೆ ವಾಲ್ಮೀಕಿ ಸಮುದಾಯದ ಹೆಸರಿನಲ್ಲಿ ನಡೆದ ಅನ್ಯಾಯ, ಹಿಂಸಾಚಾರವನ್ನು ಖಂಡಿಸಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಜಾರ್ಖಂಡ್ JSSC 2024 ಪ್ರಶ್ನೆಪತ್ರಿಕೆ ಸೋರಿಕೆ: 120 ಉತ್ತರಗಳು, WhatsApp ಮೂಲಕ ಸೋರಿಕೆ; CID ಸ್ಫೋಟಕ ವರದಿ