ಜಮೀರ್ ಅಹಮದ್ ಖಾನ್ - ಸರ್ದಾರ್ ಸರ್ಫರಾಜ್ ಖಾನ್ 
ರಾಜ್ಯ

ಸಚಿವ ಜಮೀರ್ ಆಪ್ತ ಸರ್ಫರಾಜ್ ಖಾನ್ ಮನೆ ಮೇಲೆ ಲೋಕಾಯುಕ್ತ ದಾಳಿ: 38 ಎಕರೆ ಭೂಮಿ ಸೇರಿ ₹14.38 ಕೋಟಿ ರೂ ಮೌಲ್ಯದ ಸಂಪತ್ತು ಪತ್ತೆ!

ಶೋಧದ ಸಮಯದಲ್ಲಿ, ಖಾನ್ ಅವರು ನಾಲ್ಕು ಮನೆಗಳು, 37 ಎಕರೆ ಕೃಷಿ ಭೂಮಿಯನ್ನು ಹೊಂದಿರುವುದು ಪತ್ತೆಯಾಗಿದ್ದು, ಇದು ₹8.44 ಕೋಟಿ ಮೌಲ್ಯದ್ದಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಅಂದಾಜಿಸಿದ್ದಾರೆ.

ಬೆಂಗಳೂರು: ಸಹಕಾರ ಸಂಘಗಳ ಲೆಕ್ಕಪರಿಶೋಧನಾ ವಿಭಾಗದ ನಿರ್ದೇಶಕ ಸರ್ದಾರ್ ಸರ್ಫರಾಜ್ ಖಾನ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದಾಗ, ಅವರು ₹14.38 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬುಧವಾರ ತಿಳಿಸಿದೆ.

ಲೋಕಾಯುಕ್ತ ಅಧಿಕಾರಿಗಳು 2025ರ ಡಿಸೆಂಬರ್ 24 ರಂದು ಅಕ್ರಮ ಆಸ್ತಿ (ಡಿಎ) ಗಳಿಕೆ ಪ್ರಕರಣದಲ್ಲಿ ಖಾನ್ ಅವರ ನಿವಾಸಗಳು, ಕಚೇರಿಗಳು ಮತ್ತು ಅವರ ಸಂಬಂಧಿಕರ ನಿವಾಸಗಳು ಸೇರಿದಂತೆ ಅವರಿಗೆ ಸಂಬಂಧಿಸಿದ 13 ಸ್ಥಳಗಳಲ್ಲಿ ದಾಳಿ ನಡೆಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಖಾನ್ ಸದ್ಯ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ ಸರ್ಕಾರದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಆಪ್ತರು.

ಶೋಧದ ಸಮಯದಲ್ಲಿ, ಖಾನ್ ಅವರು ನಾಲ್ಕು ಮನೆಗಳು, 37 ಎಕರೆ ಕೃಷಿ ಭೂಮಿಯನ್ನು ಹೊಂದಿರುವುದು ಪತ್ತೆಯಾಗಿದ್ದು, ಇದು ₹8.44 ಕೋಟಿ ಮೌಲ್ಯದ್ದಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಅಂದಾಜಿಸಿದ್ದಾರೆ.

₹3 ಕೋಟಿ ಮೌಲ್ಯದ ಆಭರಣಗಳು, ₹1.64 ಕೋಟಿ ಮೌಲ್ಯದ ವಾಹನಗಳು, ಸ್ಥಿರ ಠೇವಣಿಗಳು ಮತ್ತು ₹5.94 ಕೋಟಿ ಮೌಲ್ಯದ ಇತರ ಹೂಡಿಕೆಗಳನ್ನು ತಂಡವು ಪತ್ತೆಹಚ್ಚಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್