ಸಿಎಂ ಸಿದ್ದರಾಮಯ್ಯ ಜೊತೆಗೆ ಗಿಲ್ಲಿ ನಟ 
ರಾಜ್ಯ

BBK12 ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ!

ಕಾವೇರಿ ನಿವಾಸದಲ್ಲಿ ಇಂದು ಭೇಟಿಯಾದ ಗಿಲ್ಲಿನಟನಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ.

ಬೆಂಗಳೂರು: ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು, ಗೌರವ, ಸನ್ಮಾನಗಳಲ್ಲಿ ಮಿಂದೆದಿದ್ದಾರೆ. ಈ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಕಾವೇರಿ ನಿವಾಸದಲ್ಲಿ ಇಂದು ಭೇಟಿಯಾದ ಗಿಲ್ಲಿನಟನಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ.

ಗಿಲ್ಲಿ ನಟ ತಮ್ಮ ಎಂದಿನ ಶೈಲಿಯಲ್ಲೇ ಸರಳವಾಗಿ ಶರ್ಟ್ ಧರಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಗರಾಭಿವೃದ್ದಿ ಖಾತೆ ಸಚಿವ ಭೈರತಿ ಸುರೇಶ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ಕೂಡ ಉಪಸ್ಥಿತರಿದ್ದರು.

ಈ ಕುರಿತ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

SCROLL FOR NEXT