ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (ಸಂಗ್ರಹ ಚಿತ್ರ) 
ರಾಜ್ಯ

ವಿಧಾನಮಂಡಲ ವಿಶೇಷ ಅಧಿವೇಶನ: ಜನವರಿ 28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಬೆಂಗಳೂರು: ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ಗುರುವಾರ ಆರಂಭವಾಗಿದ್ದು, ಜನವರಿ 31ರ ಶವಿವಾರದವರೆಗೆ ನಡೆಯಲಿದೆ. ಈ ನಡುವೆ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣ ಮತ್ತು ವಿರೋಧ ಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಉಪಸ್ಥಿತರಿರಲಿದ್ದಾರೆ.

ಏತನ್ಮಧ್ಯೆ ಉಭಯ ಸದನಗಳನ್ನು ಉದ್ದೇಶಿಸಿ ಇಂಜು ಮಾತನಾಡಿದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರು ಸಾಂಪ್ರದಾಯಿಕವಾಗಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದುವ ಬದಲಾಗಿ ತಾವೇ ಸಿದ್ಧಪಡಿಸಿದ ಭಾಷಣ ಓದಿರುವುದು ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಅದೂ ಕೂಡ ಬರೀ ಎರಡು ನಿಮಿಷಗಳ ಭಾಷಣ ಮಾಡಿ ಹೊರನಡೆದಿದ್ದಾರೆ. ರಾಜ್ಯಪಾಲರ ಈ ನಡೆಯನ್ನು ಕಾಂಗ್ರೆಸ್ ಶಾಸಕರು ಖಂಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel