ಮಾಡೆಲ್‌ ಹೌಸ್‌ಗೆ ಬೆಂಕಿ 
ರಾಜ್ಯ

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

ಜನಾರ್ದನ್​​ ರೆಡ್ಡಿ ಒಡೆತನದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್​ ಹೌಸ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಗಂಗಾವತಿ ಶಾಸಕ ಜನಾರ್ದನ್​ ರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಮಾಲೀಕತ್ವದ ಮಾಡೆಲ್​​ ಹೌಸ್ ಗೆ ಶುಕ್ರವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಇಡೀ ಕಟ್ಟಡ ಧಗಧಗ ಹೊತ್ತಿ ಉರಿದಿದೆ.

ಬಳ್ಳಾರಿಯ ಕಂಟೋನ್​ಮೆಂಟ್​ ಬಳಿ ಇರುವ ಜನಾರ್ದನ್​​ ರೆಡ್ಡಿ ಒಡೆತನದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್​ ಹೌಸ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದು, ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಬಳ್ಳಾರಿ ಎಸ್​ಪಿ ಜೊತೆ ಜನಾರ್ದನ್ ರೆಡ್ಡಿ ಚರ್ಚೆ ನಡೆಸಿದ್ದು, ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿರುವ ಬೆಂಗಳೂರಿನಲ್ಲಿರುವ ಶಾಸಕ ಜನಾರ್ದನ ರೆಡ್ಡಿ, ಅಧಿವೇಶನ ಮುಗಿಸಿ ಬಳ್ಳಾರಿಯತ್ತ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಕೃತ್ಯ ಎಂದು ಆರೋಪ

ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಇಂದು (ಜನವರಿ 23) ಸಂಜೆ ಆರೂವರೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತ್ರಿಯಿಸಿದ ಜನಾರ್ದನ ರೆಡ್ಡಿ, ಬ್ಯಾನರ್​ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ. ಘಟನೆ ಬಗ್ಗೆ ಬಳ್ಳಾರಿ ಎಸ್​ಪಿ ಜೊತೆ ನಾನು ಮಾತಾಡಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಕೇರಳಿಗರದ್ದು ಇದೆಂಥ ಮನಸ್ಥಿತಿ: ನಟಿ ಮಾಳವಿಕಾಗೆ ಗೋಮಾಂಸ ಇಷ್ಟನಾ? ತಿಂತೀರಾ ಅಂತ ಕೇಳಿದ ಪತ್ರಕರ್ತ; ನೆಟ್ಟಿಗರ ಆಕ್ರೋಶ, Video!

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

‘ಆಕೆಯ ಹಿಂದಿನ ಚಟುವಟಿಕೆಗಳು ಹೇಗಿದ್ದವು?’: ಕಂಗನಾಗೆ ಬಾಬಾ ರಾಮ್​ದೇವ್ ತೀವ್ರ ತರಾಟೆ; ಸಂಸದೆ ವಿರುದ್ಧ ಕ್ರಮ ಕೈಗೊಳ್ಳುವಂತೆ BJPಗೆ ಆಗ್ರಹ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ