ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ನಡೆದ ಕರ್ನಾಟಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕ್ರೀಡಾಪಟುವಿಗೆ ಚಾಂಪಿಯನ್ ಟ್ರೋಫಿಯನ್ನು ಪ್ರದಾನ ಮಾಡಿದರು 
ರಾಜ್ಯ

ಕರ್ನಾಟಕ ಕ್ರೀಡಾಕೂಟ 2025-26 ಸಮಾರೋಪ: ಕಾಂಗ್ರೆಸ್ ಸರ್ಕಾರವನ್ನು ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ಮತ್ತು ಯುವ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿಯನ್ನು ಒದಗಿಸಲು ವಿಶೇಷ ಕೇಂದ್ರಗಳನ್ನು ಸ್ಥಾಪಿಸಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ಶ್ಲಾಘಿಸಿದರು.

ತುಮಕೂರು: ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು 2 ಸಾಲುಗಳ ಭಾಷಣ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಸಂಜೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿವರಣಾತ್ಮಕ ಭಾಷಣ ಮಾಡಿದರು.

ತುಮಕೂರಿನಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ 2025-26ರ ಸಮರೂಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ಮತ್ತು ಯುವ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿಯನ್ನು ಒದಗಿಸಲು ವಿಶೇಷ ಕೇಂದ್ರಗಳನ್ನು ಸ್ಥಾಪಿಸಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ಶ್ಲಾಘಿಸಿದರು.

ಕ್ರೀಡೆಯಲ್ಲಿ ಸೋಲು ಅಂದರೆ ವೈಫಲ್ಯವಲ್ಲ. ಅದು ಕಲಿಕೆಗೆ ಇನ್ನೊಂದು ಮೆಟ್ಟಿಲು. ಸೋಲು ಅನುಭವ ಒದಗಿಸುತ್ತದೆ. ಮುಂದಿನ ಗುರಿಯನ್ನು ಬಲಪಡಿಸುತ್ತದೆ ಎಂದು ಹೇಳಿದರು.

ಕ್ರೀಡಾಪಟುಗಳು ನಿರಂತರವಾಗಿ ಅಭ್ಯಾಸ ಮಾಡಿ ನಿಮ್ಮ ಆರೋಗ್ಯ ಮತ್ತು ಪಾತ್ರ ಎರಡನ್ನೂ ಕಾಪಾಡಿಕೊಳ್ಳಿ. ಕಠಿಣ ಪರಿಶ್ರಮಕ್ಕೆ ಪರ್ಯಾಯವಿಲ್ಲ. ಶಿಸ್ತು ಯಶಸ್ಸಿನ ಮಂತ್ರವಾಗಿದೆ ಎಂದು ತಿಳಿಸಿದರು.

ಕ್ರೀಡಾಪಟುಗಳ ಯಶಸ್ಸಿನ ಹಿಂದೆ ತರಬೇತುದಾರರ ಪರಿಶ್ರಮ ಹೆಚ್ಚು ಇರುತ್ತದೆ. ಕೋಚ್ಗಳು ಕ್ರೀಡಾ ತಂತ್ರಗಳನ್ನು ಕಲಿಸುವುದಲ್ಲದೆ ಆಟಗಾರರ ವ್ಯಕ್ತಿತ್ವವನ್ನು ನಿರ್ಮಿಸುತ್ತಾರೆ. ಅವರ ಕಠಿಣ ಪರಿಶ್ರಮ, ತಾಳ್ಮೆ ಮತ್ತು ಮಾರ್ಗದರ್ಶನ ಆಟಗಾರರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಕರ್ನಾಟಕದ Youth Empowerment and Sports Policy ಹಾಗೂ Amrut Sports Adoption Scheme ಸೇರಿದಂತೆ ವಿವಿಧ ಯೋಜನೆಗಳು ಕ್ರೀಡಾಪಟುಗಳನ್ನು ವೃತ್ತಿ ರೀತಿಯಲ್ಲಿ ಬೆಳೆಸಲು ಮತ್ತು ಬೆಂಬಲ ನೀಡಲು ನೆರವಾಗುತ್ತಿವೆ. ಕ್ರೀಡಾ ಪ್ರಾಧಿಕಾರದ ಮೂಲಕ ಕಾರ್ಯನಿರ್ವಹಿಸುತ್ತಿರುವ ಯೋಜನೆಗಳು ದೇಶದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ಬರುತ್ತಿವೆ.

ಪ್ರಧಾನಮಂತ್ರಿ ನೇತೃತ್ವದಲ್ಲಿ Fit India, Khelo India ಮತ್ತು Viksit Bharat ಕಾರ್ಯಕ್ರಮಗಳು ಕ್ರೀಡೆಯನ್ನು ಸಾಮೂಹಿಕ ಆಂದೋಲನವಾಗಿ ಪರಿವರ್ತಿಸಿವೆ. ಹೊಸದಾಗಿ ರೂಪಿಸಲಾದ ರಾಷ್ಟ್ರೀಯ ಕ್ರೀಡಾ ನೀತಿ 2025, 2047 ರ ವೇಳೆಗೆ ವಿಶ್ವದ ಐದು ಅಗ್ರ ಕ್ರೀಡಾ ರಾಷ್ಟ್ರಗಳಲ್ಲಿ ಸ್ಥಾನ ಪಡೆಯುವ ದೂರದೃಷ್ಟಿಯೊಂದಿಗೆ ಭಾರತವನ್ನು ಜಾಗತಿಕ ಕ್ರೀಡಾ ಶಕ್ತಿ ಕೇಂದ್ರವಾಗಿ ಇರಿಸುವ ಗುರಿಯನ್ನು ಹೊಂದಿದೆ ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT