ಕೊಲೆಯಾದ ರಾಜೇಶ್ವರಿ ಫಕ್ಕಿರಪ್ಪ ಹಾಗೂ ಹಂತಕ ಫಕ್ಕಿರಪ್ಪ 
ರಾಜ್ಯ

ಬೆಂಗಳೂರು: ಪತ್ನಿ ಕೊಂದು 'ಹಾರ್ಟ್ ಆಟ್ಯಕ್' ಕಥೆ ಕಟ್ಟಿದ ಪತಿಯ ಬಂಧನ!

ಮೂರು ವರ್ಷಗಳ ಹಿಂದಷ್ಟೇ ರಾಜೇಶ್ವರಿ ಮದುವೆಯಾಗಿತ್ತು. ಆದರೆ ಮಕ್ಕಳಿಲ್ಲದ ಕಾರಣ ದಂಪತಿ ನಡುವೆ ಜಗಳ ನಡೆಯುತಿತ್ತು ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಬೆಂಗಳೂರು: ಮಕ್ಕಳು ಬೇಕು, ಮಕ್ಕಳು ಬೇಕು ಎಂದು ಕೇಳುತ್ತಿದ್ದ ಪತ್ನಿಯನ್ನು ಕೊಂದು ಹಾರ್ಟ್ ಆಟ್ಯಕ್ ಆಗಿದೆ ಎಂದು ಕಥೆ ಕಟ್ಟಿದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನೇಗಿನಹಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

21 ವರ್ಷದ ರಾಜೇಶ್ವರಿ ಫಕ್ಕಿರಪ್ಪ ಗಿಲಕ್ಕನವರ್ ಅವರನ್ನು ಉಸಿರುಗಟ್ಟಿಸಿ ಸಾಯಿಸಿ ಬಳಿಕ ಹಾರ್ಟ್ ಆಟ್ಯಕ್' ಕಥೆ ಕಟ್ಟಿದ ಪತಿ ಫಕ್ಕಿರಪ್ಪ ಗಿಲಕ್ಕನವರ್, ಆಕೆಯ ಅಂತ್ಯಸಂಸ್ಕಾರಕ್ಕಾಗಿ ಕುಟುಂಬಸ್ಥರಿಗೆಲ್ಲಾ ಸುದ್ದಿ ಮುಟ್ಟಿಸಿದ್ದ.

ಮೂರು ವರ್ಷಗಳ ಹಿಂದಷ್ಟೇ ರಾಜೇಶ್ವರಿ ಮದುವೆಯಾಗಿತ್ತು. ಆದರೆ ಮಕ್ಕಳಿಲ್ಲದ ಕಾರಣ ದಂಪತಿ ನಡುವೆ ಜಗಳ ನಡೆಯುತಿತ್ತು ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ. ಕೋಪದ ಭರದಲ್ಲಿ ಕೋಪದ ಭರದಲ್ಲಿ ಗಿಲಕ್ಕನವರ್ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ರಾಜೇಶ್ವರಿ ಅವರ ಪೋಷಕರು ಅಂತ್ಯಕ್ರಿಯೆಗೆ ಆಗಮಿಸಿದಾಗ ಆಕೆಯ ಕತ್ತಿನ ಮೇಲೆ ಗಾಯದ ಗುರುತುಗಳನ್ನು ಗಮನಿಸಿದ್ದು, ನಿಜವಾಗಿಯೂ ಹಾರ್ಟ್ ಆಟ್ಯಕ್ ನಿಂದ ಸತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ರಾಜೇಶ್ವರಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಪ್ರಾಥಮಿಕ ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಎಂಬುದು ತಿಳಿದುಬಂದಿದೆ.

ವಿಚಾರಣೆ ವೇಳೆ ಆರೋಪಿಯು ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ನಂತರ ಆತನನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ರಾಜೇಶ್ವರಿ ಶವವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

News wrap 18-03-2026|ಅಧಿವೇಶನದಲ್ಲಿ ಬಾಕಿ ಉಳಿದ ಉತ್ತರ: ಸರ್ಕಾರಕ್ಕೆ ಹೊರಟ್ಟಿ ಗಡುವು; ವಿಧಾನಸಭೆಯಲ್ಲಿ ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ; ಅಡುಗೆ ಅನಿಲದ ಅಕ್ರಮ ಸಂಗ್ರಹಣೆ 150 ಸಿಲಿಂಡರ್ ವಶಕ್ಕೆ

ಮಹಾ ದೋಖಾ: 1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ..; Itemized bill ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ!

'KD' ಸಿನಿಮಾದ ಅಶ್ಲೀಲ ಹಾಡು ಲೋಕಸಭೆಯಲ್ಲಿ ಪ್ರತಿಧ್ವನಿ; 'ಸರ್ಸೆ ನಿನ್ನ ಸೆರಗ ಸರ್ಸೆ' ಬ್ಯಾನ್!

SCROLL FOR NEXT