ಬಂಧಿತ ಯುವತಿ 
ರಾಜ್ಯ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: 1 ಕೋಟಿ ರೂ ಗೆ ಡಿಮ್ಯಾಂಡ್ ಇಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ!

ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು.

ಬೆಂಗಳೂರು : ರಾಜ್ಯದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿಗೈದ ಆರೋಪದಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಒಂದು ಕೋಟಿ ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ.

ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದಿದ್ದು, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೆದರಿಕೆ ಮುಂದುವರಿಸಿದ್ದಳು. ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈಗ ಬ್ಲ್ಯಾಕ್​ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು; ನಾಲ್ವರಿಗೆ ಗಾಯ

'ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು': ಕರ್ನಾಟಕ ಮುಖ್ಯಕಾರ್ಯದರ್ಶಿ ಹೊಸ ಸುತ್ತೋಲೆ!

ರಾಜಸ್ಥಾನದಲ್ಲಿ ಶೀತ ಅಲೆ ತೀವ್ರ; ಮೌಂಟ್ ಅಬುನಲ್ಲಿ -7 ಡಿಗ್ರಿಗೆ ತಾಪಮಾನ ಕುಸಿತ, Video

ಬಾರ್ಡರ್ 2 ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್: ಮೊದಲ ದಿನ 31.10 ಕೋಟಿ ರೂ ಗಳಿಕೆ

ಸಿಎಂ ಭೇಟಿ ಮಾಡಿದ ದುನಿಯಾ ವಿಜಯ್; ‘ಲ್ಯಾಂಡ್​ಲಾರ್ಡ್’ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ

SCROLL FOR NEXT