ಚಿರತೆ ಸೆರೆ 
ರಾಜ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಜೀವ ತೆಗೆದ ಚಿರತೆ ಕೊನೆಗೂ ಸೆರೆ..!

ಕರ್ನಾಟಕ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಡ್ರೋನ್ ಮೇಲ್ವಿಚಾರಣೆ ಹಾಗೂ ಸ್ಥಳೀಯ ಮಟ್ಟದಲ್ಲಿ ತೀವ್ರ ಕಣ್ಗಾವಲು ಮೂಲಕ ಚಿರತೆಯ ಚಲನವಲನವನ್ನು ಪತ್ತೆ ಹಚ್ಚಲಾಯಿತು. ಕೊನೆಗೆ ಅರವಳಿಕೆ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಮೈಸೂರು: ಮಲೆ ಮಹದೇಶ್ವರ (ಎಂಎಂ) ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತನ ಬಲಿಪಡೆದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ. ಇದರೊಂದಿಗೆ ಹಲವು ದಿನಗಳಿಂದ ಮುಂದುವರಿದಿದ್ದ ಕಾರ್ಯಾಚರಣೆ ಗುರುವಾರ ತಡರಾತ್ರಿ ಅಂತ್ಯಗೊಂಡಿದೆ.

ಕರ್ನಾಟಕ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಡ್ರೋನ್ ಮೇಲ್ವಿಚಾರಣೆ ಹಾಗೂ ಸ್ಥಳೀಯ ಮಟ್ಟದಲ್ಲಿ ತೀವ್ರ ಕಣ್ಗಾವಲು ಮೂಲಕ ಚಿರತೆಯ ಚಲನವಲನವನ್ನು ಪತ್ತೆ ಹಚ್ಚಲಾಯಿತು. ಕೊನೆಗೆ ಅರವಳಿಕೆ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕಾರ್ಯಾಚರಣೆಯಲ್ಲಿ ಪಶುವೈದ್ಯರಾದ ಆದರ್ಶ್ ಅವರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದರು. ಸೆರೆ ಸಿಕ್ಕಿರುವುದು ಸುಮಾರು 2ರಿಂದ 3 ವರ್ಷದ ಗಂಡು ಚಿರತೆ ಎಂದು ತಿಳಿದುಬಂದಿದೆ.

ಈ ಚಿರತೆಯನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ತೀರ್ಮಾನಿಸಿದೆ. ಇದೇ ವೇಳೆ, ಚಿರತೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಉಸ್ತುವಾರಿ ಸಚಿವ ವೆಂಕಟೇಶ್ ಅವರು 5 ಲಕ್ಷ ರೂಪಾಯಿ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದ್ದಾರೆ.

ಬುಧವಾರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಮೇಲೆ ಚಿರತೆ ದಾಳಿ ನಡೆಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ