ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆ; ಬಾಲ್ಯ ವಿವಾಹ ತಡೆದ 'ನಮ್ಮ 112', ಹೊಯ್ಸಳ ಸಿಬ್ಬಂದಿ!

ಗುರುವಾರ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಕೋಡಿಚಿಕ್ಕನಹಳ್ಳಿಯಲ್ಲಿ ಬಾಲ್ಯ ವಿವಾಹ ನಡೆಸಲು ಯತ್ನಿಸುತ್ತಿರುವುದನ್ನು ಗಮನಿಸಿದ ವ್ಯಕ್ತಿ ತಕ್ಷಣವೇ ‘ನಮ್ಮ 112’ ಗೆ ಕರೆ ಮಾಡಿ ಮಾಹಿತಿ ನೀಡಿದರು.

ಬೆಂಗಳೂರು: ಸಾರ್ವಜನಿಕರೊಬ್ಬರ ದೂರಿನ ಮೇರೆಗೆ ನಮ್ಮ 112 ಸಿಬ್ಬಂದಿ ಬಾಲ್ಯ ವಿವಾಹವನ್ನು ಯಶಸ್ವಿಯಾಗಿ ತಡೆದಿದ್ದಾರೆ.

ಗುರುವಾರ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಕೋಡಿಚಿಕ್ಕನಹಳ್ಳಿಯಲ್ಲಿ ಬಾಲ್ಯ ವಿವಾಹ ನಡೆಸಲು ಯತ್ನಿಸುತ್ತಿರುವುದನ್ನು ಗಮನಿಸಿದ ವ್ಯಕ್ತಿ ತಕ್ಷಣವೇ ‘ನಮ್ಮ 112’ ಗೆ ಕರೆ ಮಾಡಿ ಮಾಹಿತಿ ನೀಡಿದರು.

ನಮ್ಮ 112 ಸಿಬ್ಬಂದಿ ಹೊಯ್ಸಳ-209 ಸಿಬ್ಬಂದಿಗೆ ಮಾಹಿತಿಯನ್ನು ರವಾನಿಸಿದರು. ಗಸ್ತು ವಾಹನದಲ್ಲಿದ್ದ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಸುರೇಶ್ ಮತ್ತು ಹೆಡ್ ಕಾನ್‌ಸ್ಟೆಬಲ್ ಉಮೇಶ್ ನಾಗಣ್ಣವರ್ ಸ್ಥಳಕ್ಕೆ ಧಾವಿಸಿ ವಿವರಗಳನ್ನು ಪರಿಶೀಲಿಸಿದ ನಂತರ ಮದುವೆ ಸಮಾರಂಭವನ್ನು ನಿಲ್ಲಿಸಿದರು.

ಪೊಲೀಸರು ಹದಿನೇಳು ವರ್ಷದ ಬಾಲಕಿ ಮತ್ತು ಹದಿನೆಂಟು ವರ್ಷದ ಬಾಲಕನನ್ನು ಗುರುತಿಸಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿಯಲ್ಲಿ ಕಾನೂನು ನಿಬಂಧನೆಗಳ ಬಗ್ಗೆ ಪೋಷಕರು ಮತ್ತು ಇತರ ಕುಟುಂಬ ಸದಸ್ಯರಿಗೆ ಪೊಲೀಸರು ಸಲಹೆ ನೀಡಿದರು ಮತ್ತು ಕಾನೂನು ಉಲ್ಲಂಘನೆಯ ಪರಿಣಾಮಗಳನ್ನು ವಿವರಿಸಿದರು. ಮದುವೆಯನ್ನು ಯಶಸ್ವಿಯಾಗಿ ತಡೆಯಲಾಯಿತು ಎಂದು ಪೊಲೀಸ್ ಆಯುಕ್ತರ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ