ಪ್ರಿಯಾಂಕ್ ಖರ್ಗೆ 
ರಾಜ್ಯ

'ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ; ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?'

ಸಂಸತ್ತಿನಲ್ಲಿ “ವಂದೇ ಮಾತರಂ” ಬಗ್ಗೆ ಮೂರು ದಿನಗಳ ಕಾಲ ಚರ್ಚೆ ನಡೆಸುವ ಬಿಜೆಪಿಗೆ “ಜನ ಗಣ ಮನ”ದ ಬಗ್ಗೆ ಮೂರು ನಿಮಿಷವೂ ಚರ್ಚಿಸದಷ್ಟು ಅಸಹನೆ ಏಕೆ? ರಾಷ್ಟ್ರಗೀತೆಯನ್ನು ವಿರೋಧಿಸುವ ಸಂಘದ ಪಾಠವನ್ನು ಪಾಲಿಸುತ್ತಿದ್ದಾರೆಯೇ?

ಬೆಂಗಳೂರು: ಬಿಜೆಪಿ ಮತ್ತು ರಾಜ್ಯಪಾಲರು ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ, ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜ್ಯಪಾಲು ಕೇವಲ 37 ಸೆಕೆಂಡುಗಳಲ್ಲಿ ರಾಷ್ಟ್ರಗೀತೆಗೆ ಅಪಚಾರ, ಸಂವಿಧಾನಕ್ಕೆ ದ್ರೋಹ, ಕರ್ನಾಟಕಕ್ಕೆ ಅಗೌರವ, ಕನ್ನಡಿಗರಿಗೆ ಅಪಮಾನ,ರಾಜ್ಯ ಸರ್ಕಾರಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರಿಂದ ಇಷ್ಟೆಲ್ಲ ಅಪಚಾರವಾದರೂ ಬಿಜೆಪಿಯವರ ಸಮರ್ಥನೆ ನೋಡುತ್ತಿದ್ದರೆ ರಾಜ್ಯಪಾಲರ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೇ ಅಥವಾ ಜಗನ್ನಾಥ ಭವನದಲ್ಲಿದೆಯೇ ಎಂಬ ಅನುಮಾನ ಮೂಡುತ್ತಿದೆ. ಭಾಷಣದ ನಂತರ ರಾಷ್ಟ್ರಗೀತೆಯ ಬ್ಯಾಂಡ್ ನುಡಿಸುವುದು ನಿಯಮ, ಆದರೆ ರಾಜ್ಯಪಾಲರು ರಾಷ್ಟ್ರಗೀತೆ ನುಡಿಸಲು ಒಂದು ಕ್ಷಣವೂ ಅವಕಾಶ ನೀಡದೆ ಅವಸರದ ನಡೆ ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಪಾಲರ ಈ ದೇಶದ್ರೋಹಿ ನಡವಳಿಕೆಯನ್ನು ಖಂಡಿಸದೆ ಸಮರ್ಥಿಸುತ್ತಿರುವ ಬಿಜೆಪಿಯವರದ್ದು ಬೂಟಾಟಿಕೆಯ ದೇಶಭಕ್ತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸಂಸತ್ತಿನಲ್ಲಿ “ವಂದೇ ಮಾತರಂ” ಬಗ್ಗೆ ಮೂರು ದಿನಗಳ ಕಾಲ ಚರ್ಚೆ ನಡೆಸುವ ಬಿಜೆಪಿಗೆ “ಜನ ಗಣ ಮನ”ದ ಬಗ್ಗೆ ಮೂರು ನಿಮಿಷವೂ ಚರ್ಚಿಸದಷ್ಟು ಅಸಹನೆ ಏಕೆ? ರಾಷ್ಟ್ರಗೀತೆಯನ್ನು ವಿರೋಧಿಸುವ ಸಂಘದ ಪಾಠವನ್ನು ಪಾಲಿಸುತ್ತಿದ್ದಾರೆಯೇ? ಬಿಜೆಪಿಯವರಲ್ಲಿ ಎಳ್ಳು ಕಾಳಷ್ಟು ದೇಶಭಕ್ತಿ ಇದ್ದಿದ್ದೇ ಆದರೆ ರಾಷ್ಟ್ರಗೀತೆಗೆ, ಸಂವಿಧಾನಕ್ಕೆ ರಾಜ್ಯಪಾಲರಿಂದ ಆಗಿರುವ ಅವಮಾನವನ್ನು ಖಂಡಿಸಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

SCROLL FOR NEXT