ಅಪಘಾತ 
ರಾಜ್ಯ

ಕಾರ್ಕಳ: ಕ್ರೂಸರ್‌-ಬಸ್ ನಡುವೆ ಭೀಕರ ಅಪಘಾತ; ಗಾಣಗಾಪುರದ ನಾಲ್ವರ ಸಾವು

ಅಪಘಾತದಲ್ಲಿ ‌ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು.

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ರೂಸರ್‌(ತೂಫಾನ್) ವಾಹನ ಹಾಗೂ ಸಾರಿಗೆ ಬಸ್‌ ನಡುವೆ ಸಂಭವಿಸದ ಭೀಕರ ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.

ದೇವಲ ಗಾಣಗಾಪುರದ ಚೇತನ್ ಮಾದರ(18) ಮತ್ತು ರೋಹಿದಾಸ್ ಮಾದರ (19) ಹಾಗೂ ಮಲ್ಲಮ್ಮ (45) ಅದರಂತೆ ಚಾಲಕ ಮಾನಪ್ಪ (30) ಎಂಬವರು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ‌ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು.

ಶನಿವಾರ ಸಂಜೆ ಕಾರ್ಕಳದಿಂದ ಕ್ರೂಸರ್ ಮೂಲಕ ಉಡುಪಿಗೆ ಸಂಚರಿಸುವ ಮಧ್ಯದ ಕಾರ್ಕಳ ಹತ್ತಿರ ಬಸ್ಸಿಗೆ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಇನ್ನುಳಿದ 9 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ‌ ದಾಖಲಿಸಲಾಗಿದೆ. ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

SCROLL FOR NEXT