ರಾಜ್ಯಪಾಲ 
ರಾಜ್ಯ

ಆಮಿಷಕ್ಕೊಳಗಾಗದೆ, ಮುಕ್ತ-ನ್ಯಾಯಯುತವಾಗಿ ಮತ ಚಲಾಯಿಸಿ: ಜನತೆಗೆ ರಾಜ್ಯಪಾಲ ಕರೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಪ್ರಾಮುಖ್ಯತೆ, ಘನತೆ ಮತ್ತು ಮಹತ್ವವು ಮತದಾನ ಪ್ರಕ್ರಿಯೆಯ ಮೂಲಕ ಬಲಗೊಳ್ಳುತ್ತದೆ. ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ.

ಬೆಂಗಳೂರು: ಮತದಾರರು ತಮ್ಮ ಮತದಾನದ ಹಕ್ಕನ್ನು ಭಯ, ಒತ್ತಡ ಮತ್ತು ಯಾವುದೇ ಪ್ರಚೋದನೆಯಿಲ್ಲದೆ ಮುಕ್ತವಾಗಿ ಮತ್ತು ನ್ಯಾಯಯುತವಾಗಿ ಚಲಾಯಿಸಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರೆ ನೀಡಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ನಗರದಲ್ಲಿ ಆಯೋಜಿಸಿದ್ದ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಮಾತನಾಡಿದರು.

ಚುನಾವಣಾ ಕಾರ್ಯಕ್ಷಮತೆಯಲ್ಲಿನ ಶ್ರೇಷ್ಠತೆಗಾಗಿ ಭಾರತ ಚುನಾವಣಾ ಆಯೋಗವು ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗಳನ್ನೂ ರಾಜ್ಯಪಾಲರು ವಿತರಿಸಿದರು.

ಅತ್ಯುತ್ತಮ ಚುನಾವಣಾ ಕಾರ್ಯ ನಿರ್ವಹಿಸಿದ ತುಮಕೂರು ಜಿಲ್ಲೆಯ ಶುಭಾ ಕಲ್ಯಾಣ್, ಚಾಮರಾಜ ನಗರದ ಶಿಲ್ಪಾನಾಗ್ ಸಿ.ಟಿ, ಕೊಪ್ಪಳದ ಸುರೇಶ್ ಬಿ. ಇಟ್ನಾಳ್, ಹಾವೇರಿಯ ಡಾ.ವಿಜಯ ಮಹಾಂತೇಶ ಬಿ. ದಾನಮ್ಮನವರ್, ಬೆಂಗಳೂರು ನಗರದ ಜಿ. ಜಗದೀಶ್ ಹಾಗೂ ಯಾದಗಿರಿಯ ಡಾ. ಸುಶೀಲಾ ಬಿ ಅವರಿಗೆ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಪ್ರಾಮುಖ್ಯತೆ, ಘನತೆ ಮತ್ತು ಮಹತ್ವವು ಮತದಾನ ಪ್ರಕ್ರಿಯೆಯ ಮೂಲಕ ಬಲಗೊಳ್ಳುತ್ತದೆ. ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವಾಗಿದೆ. ಈ ಪ್ರಜಾತಂತ್ರ ವ್ಯವಸ್ಥೆಯನ್ನು ಪ್ರಜ್ಞಾಪೂರ್ವಕವಾಗಿ ನಾಗರಿಕರು ಚಲಾಯಿಸುವ ಮತದಾನ ಪ್ರಕ್ರಿಯೆಯೇ ಕಾಪಾಡುತ್ತದೆ. ಒಂದು ಮತ, ಒಂದು ಧ್ವನಿ, ಒಂದು ಜವಾಬ್ದಾರಿ ಪ್ರಜಾಪ್ರಭುತ್ವದ ಆತ್ಮವಾಗಿದೆ ಎಂದು ಹೇಳಿದರು.

ಎಲ್ಲರನ್ನೂ ಒಳಗೊಂಡಿರುವ ಪಾರದರ್ಶಕ ಚುನಾ ವಣಾ ಪ್ರಕ್ರಿಯೆಯ ಚೌಕಟ್ಟನ್ನು ಭಾರತ ಹೊಂದಿದೆ. ಇದಕ್ಕೆ ಎಲ್ಲಾ ಸಕ್ರಿಯಮತದಾರರುನೆರವಾಗುತ್ತಿದ್ದಾರೆ. ಮತದಾನದ ಹಕ್ಕು ನಾಗರಿಕರಿಗೆ ಸಂವಿಧಾನ ನೀಡಿರುವ ಸರ್ವೋಚ್ಚ ಅಧಿಕಾರ. ಪ್ರತಿಯೊಂದು ಮತವೂ ದೇಶದ ನೀತಿಗಳು, ಅಭಿವೃದ್ಧಿಗೆ ದಿಕ್ಕು, ಮುಂದಿನ ಪೀಳಿಗೆಯ ಭವಿಷ್ಯ ಮತ್ತು ಸಾಮಾಜಿಕ ನ್ಯಾಯ ಪರಿಕಲ್ಪನೆಯನ್ನು ಬಲಪಡಿಸುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ- EU ನಡುವೆ 'Mother of All Deals: ಉರಿದುಕೊಂಡ ಅಮೆರಿಕ! ಹೇಳಿದ್ದೇನು?

ಮೆಕ್ಸಿಕೋ ಮಧ್ಯಭಾಗದಲ್ಲಿ ಫುಟ್ಬಾಲ್ ಮೈದಾನದಲ್ಲಿ ಬಂದೂಕುಧಾರಿಗಳ ಗುಂಡಿನ ದಾಳಿ: 11 ಮಂದಿ ಸಾವು, 12 ಜನರಿಗೆ ಗಾಯ-Video

ರಾಹುಲ್ ಗಾಂಧಿಗೆ 'Darpok'ಎಂದಿದ್ದಕ್ಕೆ ಜೀವ ಬೆದರಿಕೆ: ಮಾಜಿ ಕಾಂಗ್ರೆಸ್ ನಾಯಕ!

ಭಾರತ-ಯುರೋಪಿಯನ್ ಒಕ್ಕೂಟ ನಡುವೆ 'Mother of All Deals'ಗೆ ಶೀಘ್ರದಲ್ಲೇ ಅಂತಿಮ ಸಹಿ; ಒಪ್ಪಂದ 2027ರಿಂದಲೇ ಶುರು!

ವಿಮಾನ ಅಪಘಾತ: ಟೇಕ್ ಆಫ್ ವೇಳೆ ಜೆಟ್ ಅಪಘಾತ; 7 ಮಂದಿ ಸಾವು, ಬದುಕುಳಿದ ಓರ್ವ ಸಿಬ್ಬಂದಿ!

SCROLL FOR NEXT