ಸಂಗ್ರಹ ಚಿತ್ರ 
ರಾಜ್ಯ

77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧ

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲೂ 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣೆಕ್ಷಾ ಪರೇಡ್ ಮೈದಾನವು ಸಂಪೂರ್ಣವಾಗಿ ಸಿದ್ಧಗೊಂಡಿದ್ದು, ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲೂ 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಒದಗಿಸಲಾಗಿದೆ.

ಗಣ್ಯರ ಓಡಾಟ ಹೆಚ್ಚಿರುವ ಕಾರಣದಿಂದಾಗಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8.30ರಿಂದ 10-30ರವರೆಗೆ ಕಬ್ಬನ್‌ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗಿನ ಎರಡೂ ದಿಕ್ಕುಗಳಲ್ಲೂ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್