ಸಚಿವ ಮಧು ಬಂಗಾರಪ್ಪ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ  
ರಾಜ್ಯ

ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಹೇಳಿದರು.

ಶಿವಮೊಗ್ಗ: ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಅವರು ನಿನ್ನೆ ಶಿವಮೊಗ್ಗದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಧು ಬಂಗಾರಪ್ಪ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.

ಈ ಯೋಜನೆಗಳಿಗೆ ಸರ್ಕಾರವು 160 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದು ಅವರು ಮಾಹಿತಿ ನೀಡಿದರು.

‘ಒನ್ ಡಿಸ್ಟ್ರಿಕ್ಟ್, ಒನ್ ಡೆಸ್ಟಿನೇಷನ್’

ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗೂಡವಿ ಪಕ್ಷಿಧಾಮವನ್ನು ‘ಒನ್ ಡಿಸ್ಟ್ರಿಕ್ಟ್, ಒನ್ ಡೆಸ್ಟಿನೇಷನ್’ ಯೋಜನೆಯಡಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಹೇಳಿದರು. ಶ್ರೀ ಚಂದ್ರಗುಟ್ಟಿ ರೇಣುಕಾಂಬಾದೇವಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಯಾತ್ರಾಕೇಂದ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Baramati plane crash: ಅಜಿತ್ ಪವಾರ್ ಸಾವು; ವಿಮಾನ ಅಪಘಾತ ಬ್ಯೂರೋದಿಂದ ತನಿಖೆ

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ, 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

EU ವ್ಯಾಪಾರ ಒಪ್ಪಂದದಲ್ಲಿ ಭಾರತ 'ಬಿಗ್ ವಿನ್ನರ್': ಅಮೆರಿಕ ಒಪ್ಪಿಕೊಳ್ತಾ?

ವೈರಲ್ ಆಗುತ್ತಿದೆ ವಿಮಾನ ಪತನದ ಕೆಲವೇ ಗಂಟೆಗಳ ಮೊದಲು ಅಜಿತ್ ಪವಾರ್ ಹಂಚಿಕೊಂಡ ಕೊನೆಯ X ಪೋಸ್ಟ್ !

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ದುರ್ಮರಣ; Video

SCROLL FOR NEXT