ಕೃಷ್ಣ ಭೈರೇಗೌಡ  
ರಾಜ್ಯ

ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ರೂ ಏನ್ ಮಾಡ್ತಿದ್ದೀರಾ? ಎಲ್ಲಾ ಖಾಲಿ ಸರ್ಕಾರಿ ಆಸ್ತಿಗಳಿಗೆ ಬೇಲಿ ಹಾಕಿ: ಕೃಷ್ಣ ಬೈರೇಗೌಡ ಸೂಚನೆ

ಖಾಲಿ ಜಾಗ, ಸರ್ಕಾರಿ ಜಮೀನಿಗೆ ಬೇಲಿ ಇಲ್ಲವೇ ರಕ್ಷಣಾ ಗೋಡೆ ಹಾಕಲೇಬೇಕು. ನಕಾಶೆ ರಸ್ತೆ ಎಷ್ಟು ಒತ್ತುವರಿ ಆಗಿದೆ ಎಂಬ ಕುರಿತು ಮೊದಲು ಮಾಹಿತಿ ಸಂಗ್ರಹಿಸಬೇಕು. ಮತ್ತೆ ಒತ್ತುವರಿ ಆದರೆ ತಹಶೀಲ್ದಾರ್ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.

ಬೆಂಗಳೂರು: ನಗರದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಜಾಗಗಳಿಗೂ ಬೇಲಿ ಅಥವಾ ರಕ್ಷಣಾ ಗೋಡೆ ಹಾಕಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ನಗರ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಸಂಬಂಧಿಸಿ ಮಂಗಳವಾರ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಜತೆ ಸಭೆ ನಡೆಸಿದರು.

ಅನುಮತಿ ನೀಡಿದ ಪ್ರದೇಶಕ್ಕೂ ಮೀರಿ ಅನಧಿಕೃತ ಬಡಾವಣೆ ಮಾಡಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು. ಅಕ್ರಮ ಲೇಔಟ್ ನಿರ್ಮಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸೂಚನೆ ನೀಡಿದ ನಂತರವೂ ಗೋಮಾಳಗಳಲ್ಲಿ ಬಡಾವಣೆ ಮಾಡಿದವರ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಈವರೆಗೂ ನಗರ ಹಾಗೂ ಸುತ್ತಮುತ್ತ ಅಕ್ರಮ ಬಡಾವಣೆಗಳಲ್ಲಿ ನಿರ್ಮಿಸಿರುವ ಎಷ್ಟು ಮನೆಗಳನ್ನು ನೆಲಸಮ ಮಾಡಿ ಪ್ರಕರಣಗಳನ್ನು ದಾಖಲಿಸಿದ್ದೀರಿ, ನಕಲಿ ದಾಖಲೆ ಸೃಷ್ಟಿಸುವವರು ತಮ್ಮ ಕೆಲಸ ಮುಂದುವರಿಸಿದ್ಧಾರೆ. ಕಾನೂನು ಉಲ್ಲಂಘಿಸಿ ಬಡಾವಣೆ ಮಾಡುವವರಿಗೆ ಕರುಣೆ ತೋರಿಸುವ ಅಗತ್ಯ ಇಲ್ಲ ಎಂದರು.

ಖಾಲಿ ಜಾಗ, ಸರ್ಕಾರಿ ಜಮೀನಿಗೆ ಬೇಲಿ ಇಲ್ಲವೇ ರಕ್ಷಣಾ ಗೋಡೆ ಹಾಕಲೇಬೇಕು. ನಕಾಶೆ ರಸ್ತೆ ಎಷ್ಟು ಒತ್ತುವರಿ ಆಗಿದೆ ಎಂಬ ಕುರಿತು ಮೊದಲು ಮಾಹಿತಿ ಸಂಗ್ರಹಿಸಬೇಕು. ಮತ್ತೆ ಒತ್ತುವರಿ ಆದರೆ ತಹಶೀಲ್ದಾರ್ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು. ಲ್ಯಾಂಡ್ ಬೀಟ್‌ ಆ್ಯಪ್‌ನಲ್ಲಿ ಶೇ 97 ರಷ್ಟು ಸರ್ಕಾರಿ ಭೂಮಿಯನ್ನು ಗುರುತಿಸಿ ಡೇಟಾ ಎಂಟ್ರಿ ಮಾಡಲಾಗಿದೆ. ಈ ಮಾಹಿತಿ ಉಪಯೋಗಿಸಿಕೊಂಡು ನೈಜಸ್ಥಿತಿಯನ್ನು ದಿಶಾ ಆ್ಯಪ್‌ನಲ್ಲಿ ಅಪ್ಡೇಟ್ ಮಾಡಬೇಕು‌ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!