ಕುಮಟಾ ಪೊಲೀಸ್ ಠಾಣೆ 
ರಾಜ್ಯ

ಕಾರವಾರ: ಹಿಂದೂ ಮನೆಗೆ ಬೆಂಕಿ, ಮುಸ್ಲಿಂ ಯುವಕನ ಬಂಧನ!

ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿನ ಜಾತ್ರೆಗೆಂದು ದಿನಕರ್ ಕುಟುಂಬ ಸಮೇತರಾಗಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹಿಂದೂ ವ್ಯಕ್ತಿಯೊಬ್ಬರ ಮನೆಗೆ ಬೆಂಕಿ ಹಚ್ಚಿದ 18 ವರ್ಷದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿನ ಜಾತ್ರೆಗೆಂದು ದಿನಕರ್ ಕುಟುಂಬ ಸಮೇತರಾಗಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಫೈಸಾನ್ ಜಾಫರ್ ಶೇಖ್ ಎಂಬ ಯುವಕ ವೈಯಕ್ತಿಕ ದ್ವೇಷದಿಂದ ದಿನಕರ್ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಬೆಂಕಿ ಹಚ್ಚಿದ ತಕ್ಷಣವೇ ಸ್ಥಳೀಯರ ಸಮಯಪ್ರಜ್ಞೆಯಿಂದ ಆರೋಪಿಯನ್ನು ಹಿಡಿದುಕೊಳ್ಳಲಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.

ಘಟನೆಯಿಂದ ದೇವರ ಹಕ್ಕಲ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಘಟನೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಯುತ್ತಿದ್ದು, ಆರೋಪಿಯನ್ನು ಇನ್ನೂ ಬಂಧಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Baramati plane crash: ಅಜಿತ್ ಪವಾರ್ ಸಾವು; ವಿಮಾನ ಅಪಘಾತ ಬ್ಯೂರೋದಿಂದ ತನಿಖೆ

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ, 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

ಬೆಂಗಳೂರು: ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಪರಾರಿ!

EU ವ್ಯಾಪಾರ ಒಪ್ಪಂದದಲ್ಲಿ ಭಾರತ 'ಬಿಗ್ ವಿನ್ನರ್': ಅಮೆರಿಕ ಒಪ್ಪಿಕೊಳ್ತಾ?

'ನನ್ನ ಸರ್ಕಾರ ನಿಜವಾದ ಸಾಮಾಜಿಕ ನ್ಯಾಯಕ್ಕೆ ಬದ್ಧ': ಸಂಸತ್ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

SCROLL FOR NEXT