ಬ್ರೌನ್ ರಾಕ್ ಚಾಟ್ ಪಕ್ಷಿ 
ರಾಜ್ಯ

ಹಂಪಿಯಲ್ಲಿ ಅಪರೂಪದ 'Brown rock chat' ಹಕ್ಕಿ ಪತ್ತೆ: ಪಕ್ಷಿ ಪ್ರೇಮಿಗಳು ಸಂತಸ

ಬ್ರೌನ್ ರಾಕ್ ಚಾಟ್ ಸದಾ ಹಳೆಯ ಕಟ್ಟಡ ಸ್ಮಾರಕಗಳ ಮೇಲೆ ಉಳಿದುಕೊಂಡಿರುತ್ತವೆ. ಹೀಗಾಗಿ ಹಂಪಿಯ ಶತಮಾನಗಳಷ್ಟು ಹಳೆಯದಾದ ಸ್ಮಾರಕಗಳು ಮತ್ತು ಬಂಡೆಗಳಿಂದ ಕೂಡಿದ ಭೂದೃಶ್ಯವು ಈ ಪ್ರಭೇದಗಳಿಗೆ ಸೂಕ್ತವಾದ ವಾತಾವರಣವನ್ನು ಒದಗಿಸುತ್ತವೆ.

ಹಂಪಿ/ಹೊಸಪೇಟೆ: ಉತ್ತರ ಮತ್ತು ಮಧ್ಯ ಭಾರತದ ಕೆಲ ಭಾಗಗಳಲ್ಲಿ ಮಾತ್ರ ಆವಾಸಸ್ಥಾನ ಹೊಂದಿರುವ ಅಪರೂಪದ ಬ್ರೌನ್ ರಾಕ್ ಚಾಟ್ ಪಕ್ಷಿ ಹಂಪಿಯಲ್ಲಿ ಕಾಣಿಸಿಕೊಂಡಿದ್ದು, ಈ ಬೆಳವಣಿಕೆ ಪಕ್ಷಿ ಪ್ರೇಮಿಗಳ ಮತ್ತು ಸಂರಕ್ಷಣಾ ಕಾರ್ಯಕರ್ತರಲ್ಲಿ ಸಂತಸ ಮತ್ತು ಆಶ್ಚರ್ಯವನ್ನು ಮೂಡಿಸಿದೆ.

ಪಂಪಯ್ಯಸ್ವಾಮಿ ಮಳಿಮಠ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ತಂಡವು ಹಂಪಿಯಲ್ಲಿ ಪಕ್ಷಿ ವೀಕ್ಷಣೆಯಲ್ಲಿ ತೊಡಗಿದ್ದಾಗ ಅಚ್ಯುತರಾಯ ದೇಗುಲ ಸ್ಮಾರಕಗಳ ಮೇಲೆ ಬ್ರೌನ್ ರಾಕ್ ಚಾಟ್ ಓಡಾಡುತ್ತಿರುವುದು ಕಂಡು ಬಂದಿದೆ. ಇದನ್ನು ಕಂಡು ಸಬ್ಯಸಾಚಿ ರಾಯ್ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಬ್ರೌನ್ ರಾಕ್ ಚಾಟ್ ಸದಾ ಹಳೆಯ ಕಟ್ಟಡ ಸ್ಮಾರಕಗಳ ಮೇಲೆ ಉಳಿದುಕೊಂಡಿರುತ್ತವೆ. ಹೀಗಾಗಿ ಹಂಪಿಯ ಶತಮಾನಗಳಷ್ಟು ಹಳೆಯದಾದ ಸ್ಮಾರಕಗಳು ಮತ್ತು ಬಂಡೆಗಳಿಂದ ಕೂಡಿದ ಭೂದೃಶ್ಯವು ಈ ಪ್ರಭೇದಗಳಿಗೆ ಸೂಕ್ತವಾದ ವಾತಾವರಣವನ್ನು ಒದಗಿಸುತ್ತವೆ.

ಇದಕ್ಕೂ ಮೊದಲು ಈ ಪಕ್ಷಿಯನ್ನು ಪರಿಸರ ಪ್ರೇಮಿ ಪಂಪಯ್ಯಸ್ವಾಮಿ ಮಳಿಮಠ ಅವರು ಕೊಪ್ಪಳ ಜಿಲ್ಲೆಯ ಇಟಗಿ ಮಹಾದೇವ ದೇಗುಲದ ಬಳಿ ಪತ್ತೆ ಹಚ್ಚಿದ್ದರು.

ಇದರ ವೈಜ್ಞಾನಿಕ ಹೆಸರು Oenanthe fusca. ಇದು ಸುಮಾರು 17 ಸೆ.ಮೀ. ಉದ್ದವಿರುತ್ತದೆ. ಸಾಮಾನ್ಯ 'ಇಂಡಿಯನ್ ರಾಬಿನ್' ಪಕ್ಷಿಗಿಂತ ಸ್ವಲ್ಪ ದೊಡ್ಡದಾಗಿರುತ್ತದೆ. ಸಂಪೂರ್ಣ ಕಂದು ಬಣ್ಣದ ದೇಹ, ರೆಕ್ಕೆ ಮತ್ತು ಬಾಲದ ಭಾಗಗಳು ಸ್ವಲ್ಪ ಗಾಢವಾಗಿರುತ್ತವೆ. ಇವು ಹೆಚ್ಚಾಗಿ ಹಳೆಯ ಕೋಟೆಗಳು, ಪಾಳುಬಿದ್ದ ಕಟ್ಟಡಗಳು, ಬಂಡೆಗಳ ನಡುವೆ ಮತ್ತು ಕಲ್ಲುಗಣಿಗಳಲ್ಲಿ ವಾಸಿಸುತ್ತವೆ. ನೆಲದ ಮೇಲೆ ಕಂಡುಬರುವ ಸಣ್ಣಪುಟ್ಟ ಕೀಟಗಳೇ ಇವುಗಳ ನೆಚ್ಚಿನ ಆಹಾರ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ajit Pawar: ಇಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಂತ್ಯಕ್ರಿಯೆ: ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸುವ ನಿರೀಕ್ಷೆ

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

ತಮಿಳು ನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ, ಒಪ್ಪಂದಕ್ಕೆ ಬಾರದ ಮಾತುಕತೆ, ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

SCROLL FOR NEXT