ವೀರೇಂದ್ರ ಪಪ್ಪಿ 
ರಾಜ್ಯ

ಒಟ್ಟಾರೆ 320 ಕೋಟಿ ಆಸ್ತಿ ಮುಟ್ಟುಗೋಲು: ಕರ್ನಾಟಕ Congress ಶಾಸಕ, ಸಹಚರರು ಅಕ್ರಮ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್'; ED

ಕರ್ನಾಟಕ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರು ರಾಷ್ಟ್ರವ್ಯಾಪ್ತಿಯ 'ಅಕ್ರಮ' ಆನ್‌ಲೈನ್ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್' ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ್ದು ಹಣ ವರ್ಗಾವಣೆ ತನಿಖೆಯ ಭಾಗವಾಗಿ 177 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರು/ನವದೆಹಲಿ: ಕರ್ನಾಟಕ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರು ರಾಷ್ಟ್ರವ್ಯಾಪ್ತಿಯ 'ಅಕ್ರಮ' ಆನ್‌ಲೈನ್ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್' ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ್ದು ಹಣ ವರ್ಗಾವಣೆ ತನಿಖೆಯ ಭಾಗವಾಗಿ 177 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳ ಒಟ್ಟು ಮೌಲ್ಯ 320 ಕೋಟಿ ರೂ.ಗಳಿಗೆ ತಲುಪಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (PMAL) ಅಡಿ ಕೆಲವು ಚರ ಆಸ್ತಿಗಳೊಂದಿಗೆ ಕೃಷಿ ಮತ್ತು ವಸತಿ ಪ್ಲಾಟ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ತನಿಖಾ ಸಂಸ್ಥೆ ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ ಎಂದು ED ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ಆಸ್ತಿಗಳು ಯಾರಿಗೆ ಸೇರಿವೆ ಎಂಬುದನ್ನು ಅದು ನಿರ್ದಿಷ್ಟಪಡಿಸಿಲ್ಲ.

ಕರ್ನಾಟಕದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 51 ವರ್ಷದ ಶಾಸಕ ವೀರೇಂದ್ರ ಪಪ್ಪಿಯನ್ನು 2025ರ ಆಗಸ್ಟ್ ನಲ್ಲಿ ಸಿಕ್ಕಿಂನಲ್ಲಿ ಇಡಿ ಬಂಧಿಸಿತ್ತು. ಅಲ್ಲಿ ಅವರು ಕ್ಯಾಸಿನೊವನ್ನು ಗುತ್ತಿಗೆ ಪಡೆಯಲು ವ್ಯಾಪಾರ ಪ್ರವಾಸಕ್ಕೆ ಹೋಗಿದ್ದರು. ಸದ್ಯ ಪಪ್ಪಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ಇಡಿ ಪಪ್ಪಿಯನ್ನು ಪ್ರಕರಣದಲ್ಲಿ 'ಪ್ರಮುಖ ಆರೋಪಿ' ಎಂದು ಕರೆದಿತ್ತು.

ಕೆಸಿ ವೀರೇಂದ್ರ ಮತ್ತು ಅವರ ಸಹಚರರು ರಾಷ್ಟ್ರವ್ಯಾಪಿ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಜಾಲದ ಹಿಂದಿನ ಮಾಸ್ಟರ್‌ಮೈಂಡ್‌ಗಳು ಎಂಬುವದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಇಡಿ ಆರೋಪಿಸಿದೆ. ಕೇಂದ್ರ ಸರ್ಕಾರವು ಕಳೆದ ವರ್ಷ ಭಾರತದಲ್ಲಿ ಆನ್‌ಲೈನ್ ರಿಯಲ್-ಮನಿ ಗೇಮಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ: ಬಜೆಟ್ ಅನುದಾನ ಕುರಿತು ಚರ್ಚೆ!

ಬೆಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್‌ ಲೋಕಾಯುಕ್ತ ಬಲೆಗೆ

SCROLL FOR NEXT