ಅಂಬರೀಷ್ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜ್ಯ

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

ಅಂಬರೀಶ್ ನನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬಂದೆ, ಆದರೆ ಆತ ತೊಳೆದುಬಿಟ್ಟು ಹೋದ ಎಂದು ಹೇಳಿಕೊಂಡು, ಬಳಿಕ ಪಕ್ಷ ತೊರೆದು ಹೋದ ವಿಚಾರಕ್ಕೆ ಸಂಬಂಧಿಸಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದಾರೆ.

ಮಂಡ್ಯ: ಮಾಜಿ ಸಂಸದ ಎಲ್​​ಆರ್​ ಶಿವರಾಮೇಗೌಡರದ್ದು ಎನ್ನಲಾದ ಆಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತನೊಂದಿಗೆ ಫೋನ್‌ನಲ್ಲಿ ಮಾತನಾಡುವ ವೇಳೆ ಮಾತಿನ ಭರದಲ್ಲಿ ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟು, ಕೆಲ ರಾಜಕೀಯ ನಾಯಕರಿಗೆ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಕ್ಷೇಪಾರ್ಹ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಜೆಡಿಎಸ್ ಕಾರ್ಯಕರ್ತನೊಬ್ಬರೊಂದಿಗೆ ದೂರವಾಣಿ ಸಂಭಾಷಣೆ ವೇಳೆ ಅವರು ಅಶ್ಲೀಲ ಹಾಗೂ ಅವಾಚ್ಯ ಪದಗಳನ್ನು ಬಳಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ದಿವಂಗತ ನಟ ಅಂಬರೀಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ

ಅಂಬರೀಶ್ ನನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬಂದೆ, ಆದರೆ ಆತ ತೊಳೆದುಬಿಟ್ಟು ಹೋದ ಎಂದು ಹೇಳಿಕೊಂಡು, ಬಳಿಕ ಪಕ್ಷ ತೊರೆದು ಹೋದ ವಿಚಾರಕ್ಕೆ ಸಂಬಂಧಿಸಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಈ ಆಡಿಯೋ ವೈರಲ್ ಆದ ಬಳಿಕ, ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಾರ್ವಜನಿಕ ಜೀವನದಲ್ಲಿರುವ ನಾಯಕರು ಜವಾಬ್ದಾರಿಯುತ ಭಾಷೆ ಬಳಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ಕಿಡಿಕಾರಿರುವ ಅವರು, ಲೋಕಸಭೆ ಉಪಚುನಾವಣೆಗೆ ಟಿಕೆಟ್ ನೀಡಿ ನನ್ನಿಂದ ಸುಮಾರು 36 ಕೋಟಿ ರೂಪಾಯಿ ಖರ್ಚು ಮಾಡಿಸಿ, ಮತ್ತೆ ಟಿಕೆಟ್ ನೀಡದೆ ನನ್ನನ್ನು ಮೋಸಗೊಳಿಸಿದ ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಜೆಡಿಎಸ್ ಪಕ್ಷದಲ್ಲಿ ಒಕ್ಕಲಿಗ ಸಮುದಾಯದ ನಾಯಕರನ್ನು ಬೆಳೆಯಲು ಅವಕಾಶ ನೀಡಲಿಲ್ಲ ಎಂಬ ಆರೋಪವನ್ನೂ ಅವರು ಮುಂದಿಟ್ಟಿದ್ದಾರೆ. ಪಕ್ಷದೊಳಗಿನ ನಾಯಕತ್ವದ ರಾಜಕಾರಣವನ್ನು ಪ್ರಶ್ನಿಸಿರುವ ಅವರು, ತಮ್ಮದೇ ಪಕ್ಷದ ಚಲುವರಾಯಸ್ವಾಮಿ, ಮಾಜಿ ಸಂಸದ ದಿವಂಗತ ಮಾದೇಗೌಡ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧವೂ ಅವಾಚ್ಯ ಭಾಷೆಯಲ್ಲಿ ಟೀಕೆ ಮಾಡಿರುವುದು ಆಡಿಯೋದಲ್ಲಿ ಕೇಳಿಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ajit Pawar: ಇಂದು ಮಧ್ಯಾಹ್ನ ಬಾರಾಮತಿಯಲ್ಲಿ ಅಂತ್ಯಕ್ರಿಯೆ: ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸುವ ನಿರೀಕ್ಷೆ

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, Video Viral

SCROLL FOR NEXT