ಯುಟಿ ಖಾದರ್ 
ರಾಜ್ಯ

ರಾಜ್ಯ ವಿಧಾನಮಂಡಲ ಅಧಿವೇಶನ ಫೆಬ್ರವರಿ 4 ರವರೆಗೆ ವಿಸ್ತರಣೆ

"ಜನವರಿ 22 ರಿಂದ ಪ್ರಾರಂಭವಾದ ಒಂಬತ್ತನೇ ಅಧಿವೇಶನ ಜನವರಿ 31 ರ ಬದಲಿಗೆ ಫೆಬ್ರವರಿ 4 ರವರೆಗೆ ಮುಂದುವರಿಸಲು ಇಂದು ನಡೆದ ಸದನ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ" ಎಂದು ಯುಟಿ ಖಾದರ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನವನ್ನು ಫೆಬ್ರವರಿ 4 ರವರೆಗೆ, ಅಂದರೆ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಗುವುದು ಎಂದು ಸ್ಪೀಕರ್ ಯು ಟಿ ಖಾದರ್ ಗುರುವಾರ ಪ್ರಕಟಿಸಿದ್ದಾರೆ.

ಜನವರಿ 22 ರಿಂದ ಪ್ರಾರಂಭವಾದ ವಿಶೇಷ ಜಂಟಿ ಅಧಿವೇಶನ ಜನವರಿ 31 ರಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮನರೇಗಾ ಕಾಯ್ದೆ ಕುರಿತು ಸಮಗ್ರ ಚರ್ಚೆ ನಡೆಸಲು ಅಧಿವೇಶನವನ್ನು ವಿಸ್ತರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಒಲವು ವ್ಯಕ್ತಪಡಿಸಿದ್ದರು.

"ಜನವರಿ 22 ರಿಂದ ಪ್ರಾರಂಭವಾದ ಒಂಬತ್ತನೇ ಅಧಿವೇಶನ ಜನವರಿ 31 ರ ಬದಲಿಗೆ ಫೆಬ್ರವರಿ 4 ರವರೆಗೆ ಮುಂದುವರಿಸಲು ಇಂದು ನಡೆದ ಸದನ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ" ಎಂದು ಯುಟಿ ಖಾದರ್ ತಿಳಿಸಿದ್ದಾರೆ.

ಗುರುವಾರ ಮತ್ತು ಜನವರಿ 30 ರಂದು ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಕುರಿತು ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ಹೇಳಿದ್ದಾರೆ.

ಜನವರಿ 31 ರಂದು ಅಧಿವೇಶನ ಇರುವುದಿಲ್ಲ. ಫೆಬ್ರವರಿ 2 ರಂದು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಲಿದ್ದಾರೆ ಎಂದು ಖಾದರ್ ಸದನಕ್ಕೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!

ಚಲನಚಿತ್ರೋತ್ಸವದಲ್ಲಿ ‘Palestinian’ ಸಿನೆಮಾಗಳಿಗೆ ನಿರ್ಬಂಧ: ಪ್ರಕಾಶ್‌ ರಾಜ್‌ ಪ್ರತಿರೋಧ, ಗಟ್ಟಿ ನಿಲುವು ತೆಗೆದುಕೊಳ್ಳುವಂತೆ ಸಿಎಂಗೆ ಆಗ್ರಹ

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಲು ಕಾರಣ ಪುತ್ರ ವ್ಯಾಮೋಹವೊ, ಸ್ವಪಕ್ಷೀಯರ ಬೆದರಿಕೆಯೊ?: ಸುನಿಲ್‌ಕುಮಾರ್

vbgramg ಕಾಯ್ದೆ ಮೂಲಕ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಆಡಳಿತದಲ್ಲಿ ಯತ್ರೀಂದ್ರ ಹಸ್ತಕ್ಷೇಪ ನೋಡಿಲ್ಲ; ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು: ಮನುಷ್ಯತ್ವ ಮೋಕ್ಷಕ್ಕೆ ಮೂಲ; ಡಿಕೆಶಿ

SCROLL FOR NEXT