ಬಿಎಂಟಿಸಿ ಬಸ್ ಮೇಲಿರುವ ವಿಮಲ್ ಎಲೈಚಿ ಜಾಹೀರಾತು 
ರಾಜ್ಯ

ರಾಜ್ಯದ ಎಲ್ಲಾ ಬಸ್ ನಿಲ್ದಾಣ ಹಾಗೂ ಬಸ್​​ಗಳ ಮೇಲೆ ತಂಬಾಕು ಜಾಹೀರಾತು ನಿಷೇಧ

ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ಸಾರ್ವಜನಿಕರಿಂದ ತೀವ್ರ ಟೀಕೆಯ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಮತ್ತು ಬಸ್ ಗಳ ಮೇಲೆ ತಂಬಾಕು ಉತ್ಪನ್ನಗಳ ಸೇವನೆ ಉತ್ತೇಜಿಸುವ ಎಲ್ಲಾ ನೇರ ಮತ್ತು ಪರೋಕ್ಷ ಜಾಹೀರಾತುಗಳನ್ನು ನಿಷೇಧಿಸಿದೆ.

ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಡಬ್ಲ್ಯೂಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಕೆಕೆಆರ್‌ಟಿಸಿ)ದ ವ್ಯವಸ್ಥಾಪಕ ನಿರ್ದೇಶಕರಿಗೆ ನೀಡಿದ ಟಿಪ್ಪಣಿಯಲ್ಲಿ, ತಮ್ಮ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ತರಬೇಕು ಎಂದು ಆದೇಶಿಸಿದ್ದಾರೆ.

"ಸಾರ್ವಜನಿಕರ ಹಿತದೃಷ್ಟಿಯಿಂದ, ತಂಬಾಕು ಉತ್ಪನ್ನಗಳ ಸೇವನೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಉತ್ತೇಜಿಸುವ ಯಾವುದೇ ಜಾಹೀರಾತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಸ್ಸುಗಳಲ್ಲಿ ಅಥವಾ ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಬಾರದು ಎಂದು ನಾನು ಈ ಮೂಲಕ ನಿರ್ದೇಶಿಸುತ್ತೇನೆ" ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಅಂತಹ ಜಾಹೀರಾತುಗಳನ್ನು ಈಗಾಗಲೇ ಬಸ್ಸುಗಳಲ್ಲಿ ಅಥವಾ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಿದ್ದರೆ, ಅವುಗಳನ್ನು ತೆಗೆದುಹಾಕಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video Viral

ಮಗನಿಂದಲೇ ತಂದೆ-ತಾಯಿ, ಸಹೋದರಿಯ ಕೊಲೆ! ಮಿಸ್ಸಿಂಗ್ ಕೇಸ್ ನಾಟಕ, ರಹಸ್ಯ ಬಹಿರಂಗ!

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ರಾಜೀವ್ ಗೌಡಗೆ ಜಾಮೀನು ಮಂಜೂರು

ವಾಕಿಂಗ್ ಗೆ ಹೋಗಿದ್ದ ಮಹಿಳೆ ಮೇಲೆ ಸಾಕು ನಾಯಿ ಭೀಕರ ದಾಳಿ, Video Viral

SCROLL FOR NEXT