ಡಿ.ಕೆ. ಶಿವಕುಮಾರ್ 
ರಾಜ್ಯ

ಉದ್ಯಮಿ ರಾಯ್ ಆತ್ಮಹತ್ಯೆ: ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುವುದು ನಮ್ಮ ಸರ್ಕಾರದ ಕೆಲಸ- ಡಿ.ಕೆ ಶಿವಕುಮಾರ್; Video

ಉನ್ನತ ಮಟ್ಟದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ಐಟಿ ಬಗ್ಗೆ ಮಾತನಾಡಿದರೆ ರಾಜಕೀಯ ಆಗುತ್ತದೆ. ಈ ಕಿರುಕುಳ ಖಂಡಿಸುತ್ತೇನೆ, ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಕನಕಪುರ: ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.

ಕನಕೋತ್ಸವದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಅಧಿಕಾರಿಗಳು ಅನೇಕ ಪ್ರಶ್ನೆ ಕೇಳುವಾಗ, ಐದು ನಿಮಿಷ ಸಮಯ ನೀಡಿ ಎಂದು ಹೇಳಿ ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇರಳದಿಂದ ವಿಚಾರಣೆಗೆ ಒಂದು ತಂಡ ಬಂದಿತ್ತು ಎಂಬ ಮಾಹಿತಿ ಇದೆ. ಈ ಬಗ್ಗೆ ದೆಹಲಿಯಿಂದಲೂ ವರದಿ ಕೇಳಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ.

ರಾಯ್ ಅವರು ಒಳ್ಳೆಯ ಉದ್ಯಮಿಗಳಾಗಿದ್ದರು, ಈ ರೀತಿ ಆಗಬಾರದಿತ್ತು, ಉನ್ನತ ಮಟ್ಟದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ಐಟಿ ಬಗ್ಗೆ ಮಾತನಾಡಿದರೆ ರಾಜಕೀಯ ಆಗುತ್ತದೆ. ಈ ಕಿರುಕುಳ ಖಂಡಿಸುತ್ತೇನೆ, ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೀಟ್ ಚಾರ್ಜ್‌ಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಇನ್ನು ಮುಂದೆ ಶೇ.60ರಷ್ಟು ಸೀಟುಗಳು ಉಚಿತ..!

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆ!

'ಪ್ರೀತಿ ಮಾಡಿದ್ದು ನಮ್ಮನ್ನು, ಆದರೆ ಮದುವೆಯಾಗಿದ್ದು ಮೋದಿಯನ್ನು': ನಗೆಗಡಲಲ್ಲಿ ತೇಲಿದ ಸದನ

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

SCROLL FOR NEXT