ಕ್ರೆಸ್ಟ್ ಗೇಟ್ ಕುಸಿತ  
ರಾಜ್ಯ

ತುಂಗಾಭದ್ರಾ ಕ್ರೆಸ್ಟ್ ಗೇಟ್ ನಿರ್ಮಾಣಕ್ಕೆ ನೀಡಿದ್ದ ಹಣ ವಾಪಸ್: ಸರ್ಕಾರದ ವಿರುದ್ಧ BJP ಆಕ್ರೋಶ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತುಂಗಭದ್ರಾ ಮಂಡಳಿ ಮೇ 2026ರೊಳಗೆ ಎಲ್ಲಾ ಹೊಸ ಗೇಟ್‌ಗಳನ್ನು ಅಳವಡಿಸಲು ಕ್ರಮ ಕೈಗೊಂಡಿದ್ದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ.

ಬೆಂಗಳೂರು: ತುಂಗಭದ್ರಾ ಜಲಾಶಯಕ್ಕೆ 33 ಹೊಸ ಗೇಟ್‌ಗಳನ್ನು ಅಳವಡಿಸುವ ಸಂಬಂಧ ಕರ್ನಾಟಕ ಸರ್ಕಾರ ತನ್ನ ಪಾಲಿನ ಹಣವನ್ನು ಹಿಂಪಡೆದಿದೆ ಎಂದು ಹೇಳಲಾಗುತ್ತಿದ್ದು. ಇದರ ಬೆನ್ನಲ್ಲೇ ರಾಜ್ಯದ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು. ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತುಂಗಭದ್ರಾ ಮಂಡಳಿ ಮೇ 2026ರೊಳಗೆ ಎಲ್ಲಾ ಹೊಸ ಗೇಟ್‌ಗಳನ್ನು ಅಳವಡಿಸಲು ಕ್ರಮ ಕೈಗೊಂಡಿದ್ದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಹಿತವನ್ನು ಕಾಪಾಡಬೇಕಾದರೆ ಕರ್ನಾಟಕ ಸರ್ಕಾರ ತಡೆಹಿಡಿದಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಿ ತನ್ನ ಗೌರವವನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕಳೆದ ವರ್ಷ ತುಂಗಭದ್ರಾ ಜಲಾಶಯದ 19ನೇ ಗೇಟ್ ಮುರಿದ ಘಟನೆ ಎಲ್ಲರಿಗೂ ತಿಳಿದಿದೆ. ಆಗ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಗೇಟ್ ಅಳವಡಿಸಿತ್ತು. ತಜ್ಞರ ಸಲಹೆ ಮೇರೆಗೆ ಮುರಿದ ಗೇಟ್ ಸೇರಿದಂತೆ ಉಳಿದ 33 ಗೇಟ್‌ಗಳನ್ನು ಬದಲಾಯಿಸಲು ತುಂಗಗಭದ್ರಾ ಮಂಡಳಿ ಕ್ರಮ ಕೈಗೊಂಡಿದೆ.

ಈ ಗೇಟ್‌ಗಳ ಬದಲಾವಣೆ ವೆಚ್ಚವನ್ನು ಕರ್ನಾಟಕ ಹಾಗೂ ಆಂಧ್ರಪ್ರದೇಶ ಸರ್ಕಾರಗಳು ಭರಿಸಬೇಕಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರ ರೂ.10 ಕೋಟಿ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶ ಸರ್ಕಾರ ರೂ.20 ಕೋಟಿ ಬಿಡುಗಡೆ ಮಾಡಿದೆ,

ಇದರಲ್ಲಿ ಆಂಧ್ರಪ್ರದೇಶ ಸರ್ಕಾರ ಬಿಡುಗಡೆ ಮಾಡುವ ಮೊತ್ತವು ಕರ್ನಾಟಕ ಸರ್ಕಾರದ ಹೊಸಪೇಟೆ ಖಜಾನೆಯ ಮೂಲಕನೇ ಬಿಡುಗಡೆ ಮಾಡಲಾಗುತ್ತದೆ. ನಂತರ ಆಂಧ್ರ ಸರ್ಕಾರವು ತುಂಗಭದ್ರಾ ಮಂಡಳಿಗೆ ನಿರ್ವಹಣೆ ಮತ್ತು ವೇತನಕ್ಕಾಗಿಕರ್ನಾಟಕ ಸರ್ಕಾರದ ಹೊಸಪೇಟೆ ಖಜಾನೆಹೆ 33 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಮೊತ್ತವನ್ನು ತುಂಗಾಭದ್ರಾ ಮಂಡಳಿಗೆ ಪಾವತಿಸಬೇಕಾಗಿದೆ ಎಂದು ವಿವರಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ