ಉದ್ಯಮಿ ಸಿಜೆ ರಾಯ್ ಮತ್ತು ಅವರ ಕುಟುಂಬ 
ರಾಜ್ಯ

'ಅಮ್ಮನ ಜೊತೆ ಮಾತಾಡಬೇಕು ಎಂದಿದ್ದರು': ಉದ್ಯಮಿ ಸಿಜೆ ರಾಯ್ ಅಂತಿಮ ಕ್ಷಣದ ಕುರಿತು MD ಮಾತು!

ರಾಯ್ ಈಗಾಗಲೇ ಕೇರಳದಲ್ಲಿ ವಿಚಾರಣೆಗೆ ಹಾಜರಾಗಿದ್ದರು. ದುಬೈನಿಂದ ಹಿಂದಿರುಗಿದ ನಂತರ, ಅಗತ್ಯವಿದ್ದಾಗ ಬೆಂಗಳೂರಿನಲ್ಲಿ ಲಭ್ಯವಿರುತ್ತಾರೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದರು.

ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ತಮ್ಮ ಅಂತಿಮ ಕ್ಷಣದಲ್ಲಿ ತಾಯಿ ಜೊತೆ ಮಾತನಾಡಬೇಕು ಎಂದು ಇಂಗಿತ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಕಾನ್ಫಿಡೆಂಟ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಟಿಎ ಜೋಸೆಫ್ ಅವರು ಸಿಜೆ ರಾಯ್ ಅವರ ಅಂತಿಮ ಕ್ಷಣದ ಕುರಿತು ಮಾತನಾಡಿದ್ದು, ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಂಪನಿಯ ಕಚೇರಿಯಲ್ಲಿ ನಡೆದ ಘಟನೆಗಳನ್ನು ಹಂಚಿಕೊಂಡಿದ್ದಾರೆ.

ರಾಯ್ ಈಗಾಗಲೇ ಕೇರಳದಲ್ಲಿ ವಿಚಾರಣೆಗೆ ಹಾಜರಾಗಿದ್ದರು. ದುಬೈನಿಂದ ಹಿಂದಿರುಗಿದ ನಂತರ, ಅಗತ್ಯವಿದ್ದಾಗ ಬೆಂಗಳೂರಿನಲ್ಲಿ ಲಭ್ಯವಿರುತ್ತಾರೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದರು. ನಂತರ ಐಟಿ ಅಧಿಕಾರಿಗಳ ತಂಡವು ನಗರದಲ್ಲಿ ಅವರನ್ನು ವಿಚಾರಣೆ ಮಾಡಲು ಪ್ರಾರಂಭಿಸಿತು ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ, ಆದಾಯ ತೆರಿಗೆ ಇಲಾಖೆಯು ಅವರೊಂದಿಗೆ ಸಂಪರ್ಕ ಹೊಂದಿರುವ ಕಂಪನಿಗಳ ಮೇಲೆ ದಾಳಿ ನಡೆಸಿತ್ತು. ದಾಳಿಯ ಸಮಯದಲ್ಲಿ, ಅವರು ತಮ್ಮ ತಿಳಿದಿರುವ ಆದಾಯ ಮೂಲಗಳಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ತಾಯಿಯೊಂದಿಗೆ ಮಾತನಾಡಬೇಕು ಎಂದಿದ್ದ ರಾಯ್

ಇನ್ನು ಎಂಡಿ ಜೋಸೆಫ್ ಪ್ರಕಾರ, ಅತ್ತ ಐಟಿ ಅಧಿಕಾರಿಗಳ ಪರಿಶೀಲನೆ ನಡುವೆಯೇ ಇತ್ತ ರಾಯ್ ತನ್ನ ತಾಯಿಯೊಂದಿಗೆ ಮಾತನಾಡಲು ಬಯಸಿದ್ದರು. ಅಮ್ಮನ ಜೊತೆ ಮಾತನಾಡಬೇಕು ಎಂದು ಹೇಳಿದ್ದರು. ಇದಾದ ಸ್ವಲ್ಪ ಸಮಯದ ನಂತರ ಜೋಸೆಫ್ ಕ್ಯಾಬಿನ್‌ನಿಂದ ಹೊರಬಂದರು ಮತ್ತು ಸ್ವಲ್ಪ ಸಮಯದ ನಂತರ, ಭದ್ರತಾ ಸಿಬ್ಬಂದಿಗೆ ರಾಯ್ ಯಾರನ್ನೂ ಒಳಗೆ ಬಿಡದಂತೆ ಸೂಚಿಸಿ ಲಾಕ್ ಮಾಡಿಕೊಂಡಿದ್ದರು.

ಇದೇ ಸಂದರ್ಭದಲ್ಲಿ ಅವರು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಡೋರ್ ಬಡಿದರೂ ರಾಯ್ ಪ್ರತಿಕ್ರಿಯಿಸದಿದ್ದಾಗ, ಕ್ಯಾಬಿನ್ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಸಿಬ್ಬಂದಿ ಅರಿತುಕೊಂಡರು. ನಂತರ ಬಾಗಿಲು ಒಡೆದು ತೆರೆಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ರಾಯ್ ಅವರ ಶರ್ಟ್ ಮೇಲೆ ರಕ್ತದ ಕಲೆಗಳೊಂದಿಗೆ ಕುರ್ಚಿಯಲ್ಲಿ ಕುಳಿತಿದ್ದರು ಮತ್ತು ಅವರು ಪ್ರತಿಕ್ರಿಯಿಸಲಿಲ್ಲ ಎನ್ನಲಾಗಿದೆ.

ತಕ್ಷಣ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಯಿತು. ಕಚೇರಿ ತಲುಪಿದ ವೈದ್ಯಕೀಯ ಸಿಬ್ಬಂದಿಗೆ ನಾಡಿಮಿಡಿತವಿಲ್ಲ ಎಂದು ಕಂಡುಬಂದಿತು. ಅವರನ್ನು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಾರಾಯಣ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ತುರ್ತು ಚಿಕಿತ್ಸಾ ಘಟಕಕ್ಕೆ ಕರೆದೊಯ್ಯಲಾಯಿತು, ಆದರೆ ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಪೊಲೀಸ್ ಪ್ರಕರಣ ಮತ್ತು ತನಿಖೆ

ಘಟನೆಯ ನಂತರ, ರಾಯ್ ಸಾವಿಗೆ ಕಾರಣವಾದ ಘಟನೆಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಕೋರಿ ಜೋಸೆಫ್ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದ್ದಾರೆ. ರಾಯ್ ಈ ತೀವ್ರ ಕ್ರಮ ಕೈಗೊಳ್ಳಲು ಕಾರಣವಾದ ಸಂದರ್ಭಗಳನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಜೋಸೆಫ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಘಟನೆ ಮಧ್ಯಾಹ್ನ 3:00 ರಿಂದ 3:30 ರ ನಡುವೆ ನಡೆದಿದೆ ಎಂದು ಹೇಳಿದ್ದು, ಕಳೆದ ಮೂರು ದಿನಗಳಿಂದ ಕೇರಳದ ಐಟಿ ತಂಡಗಳು ರಾಯ್ ಅವರ ಕಚೇರಿಗಳಲ್ಲಿ ಶೋಧ ನಡೆಸುತ್ತಿದ್ದು, ಘಟನೆ ನಡೆದ ದಿನವೂ ಅವರನ್ನು ಪ್ರಶ್ನಿಸಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾ ನೂತನ DCM ಸುನೇತ್ರಾ ಪವಾರ್‌ಗೆ ಕಂದಾಯ ಸೇರಿ ಮೂರು ಖಾತೆ ಹಂಚಿಕೆ; ಕೈತಪ್ಪಿದ ಹಣಕಾಸು

ನಂ. 1 ಆಟಗಾರ್ತಿ ಅರಿನಾ ಮಣಿಸಿದ ಎಲೆನಾ ರೈಬಾಕಿನಾ ಮುಡಿಗೆ Australian Open ಕಿರೀಟ

'ಮನ ಮೆಚ್ಚಿದ ಅಪ್ಪ': ಮಗನ ಜೀವ ಉಳಿಸಲು ಜೀವನ್ಮರಣ ಹೋರಾಟ, ಚಿರತೆಯನ್ನು ಬಡಿದು ಕೊಂದ ತಂದೆ

"ನಾವು ಭಿಕ್ಷೆ ಬೇಡುತ್ತೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ": ಪಾಕ್ ಪ್ರಧಾನಿ

BBK-12 ರನ್ನರ್ ಅಪ್ 'ರಕ್ಷಿತಾ ಶೆಟ್ಟಿ' ಫ್ರಿ ಆದ್ರಾ? ಕಿಚ್ಚನ ಬಗ್ಗೆ ಸುದೀರ್ಘ ಪತ್ರ!

SCROLL FOR NEXT