ಬೆಂಗಳೂರಿನಲ್ಲಿ ಪಾದಾಚಾರಿ ಮಾರ್ಗಗಳ ಅತಿಕ್ರಮಣ ತೆರವು ಕಾರ್ಯಾಚರಣೆ 
ರಾಜ್ಯ

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video

ಗ್ರೇಟರ್ ಬೆಂಗಳೂರು ಅಥಾರಿಟಿಯ ವ್ಯಾಪ್ತಿಯ 5 ನಗರ ನಿಗಮಗಳ ವ್ಯಾಪ್ತಿಯಲ್ಲಿರುವ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಬೆಂಗಳೂರು: 'ಸುರಕ್ಷಿತ ಪಾದಚಾರಿ ಮಾರ್ಗ' (Safe Footpath Campaign) ಅಭಿಯಾನದ ಅಂಗವಾಗಿ, ಗ್ರೇಟರ್ ಬೆಂಗಳೂರು ಅಥಾರಿಟಿ (GBA) ನಗರದ ವಿವಿಧ ಭಾಗಗಳಲ್ಲಿನ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಕಾರ್ಯವನ್ನು ಬುಧವಾರ ಬೆಳಗ್ಗೆಯಿಂದ ಆರಂಭಿಸಿದೆ.

ಜೂನ್ 29ರಂದು ಕರ್ನಾಟಕದ ಸಚಿವ ಕೃಷ್ಣ ಬೈರೇಗೌಡ ಅವರು ಗ್ರೇಟರ್ ಬೆಂಗಳೂರು ಅಥಾರಿಟಿಯ ವ್ಯಾಪ್ತಿಯ ಐದು ನಗರ ನಿಗಮಗಳ ವ್ಯಾಪ್ತಿಯಲ್ಲಿರುವ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಅದರಂತೆ ಈ ಕಾರ್ಯಾಚರಣೆ ಆರಂಭವಾಗಿದೆ.

ಈ ಅಭಿಯಾನದಡಿ ಟ್ರಿನಿಟಿ ಜಂಕ್ಷನ್‌ನಿಂದ ಎಂಜಿ ರೋಡ್ ಪಾರ್ಕ್‌ವರೆಗೆ, 100 ಅಡಿ ಇಂದಿರಾನಗರ ರಸ್ತೆಯಿಂದ ದೊಮ್ಮಲೂರು ಫ್ಲೈಓವರ್‌ವರೆಗೆ, ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ರೈಲ್ವೆ ಸೇತುವೆಯವರೆಗೆ, ಅಶೋಕ ಪಿಲ್ಲರ್‌ನಿಂದ ಮಾಧವನ್ ಪಾರ್ಕ್‌ವರೆಗೆ, ಜಯನಗರದ 8ನೇ ಮತ್ತು 9ನೇ ಮುಖ್ಯರಸ್ತೆ (ಕನಕಪಾಳ್ಯ ರಸ್ತೆದಿಂದ 15ನೇ ಕ್ರಾಸ್‌ವರೆಗೆ) ಹಾಗೂ ಆರ್‌ವಿ ರಸ್ತೆಯ ಟೀಚರ್ಸ್ ಕಾಲೇಜಿನಿಂದ ಸೌತ್ ಎಂಡ್ ಸರ್ಕಲ್‌ವರೆಗೆ ಅತಿಕ್ರಮಣ ತೆರವು ಕಾರ್ಯ ನಡೆಯಲಿದೆ.

ಸುಪ್ರೀಂ ಕೋರ್ಟ್ ಆದೇಶ

ಸಚಿವರ ಮಾಹಿತಿ ಪ್ರಕಾರ, ಈ ಅಭಿಯಾನವನ್ನು ಸರ್ವೋಚ್ಚ ನ್ಯಾಯಾಲಯದ ಆದೇಶಗಳು ಹಾಗೂ ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಕಾಯ್ದೆಯ ನಿಯಮಾವಳಿಗಳಿಗೆ ಅನುಗುಣವಾಗಿ ಜಾರಿಗೊಳಿಸಲಾಗುತ್ತಿದೆ.

ಬೆಳಗ್ಗೆ 9:30ಕ್ಕೆ ಶುರುವಾದ ಈ ಕಾರ್ಯಾಚರಣೆಗೆ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರ ಬೆಂಗಾವಲು ಸಹ ಒದಗಿಸಲಾಗಿದೆ.

ಜಯನಗರದಲ್ಲಿ ಕಾರ್ಯಾಚರಣೆ

ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಬುಧವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ಒತ್ತುವರಿ ಮಾಡಲಾಗಿದ್ದ ಫುಟ್​ಪಾತ್‌ಗಳನ್ನು ತೆರವುಗೊಳಿಸಲಾಗುತ್ತಿದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 153 ರಲ್ಲಿ, ಅಶೋಕ ಪಿಲ್ಲರ್‌ನಿಂದ ಮಾಧವನ್ ಪಾರ್ಕ್‌ವರೆಗೆ ಈ ತೆರವು ನಡೆಯುತ್ತಿದೆ.

ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ, ಭವಿಷ್ಯದಲ್ಲಿ ಮತ್ತೆ ಒತ್ತುವರಿ ಮಾಡದಂತೆ ನಿಗಾ ವಹಿಸಲು ಜಿಬಿಎ ಎಚ್ಚರಿಕೆ ವಹಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!