ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

'ನಿಮ್ಮ ಬಾಕಿ ಬಿಲ್‌ 3 ತಿಂಗಳಲ್ಲಿ ಪಾವತಿಸುತ್ತೇವೆ': ಗುತ್ತಿಗೆದಾರರ ಸಂಘದ ಅಧ್ಯಕ್ಷರಿಗೆ CM ಡಿ ಕೆ ಶಿವಕುಮಾರ್ ಭರವಸೆ-Video

ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಹಣಕಾಸು ಇಲಾಖೆಯೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಗುತ್ತಿಗೆದಾರರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಬೆಂಗಳೂರು: ವಿವಿಧ ಇಲಾಖೆಗಳ ಅಡಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳಿಗೆ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ 37,370 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಿಲ್‌ಗಳನ್ನು ಪಾವತಿಸಲು ಮೂರು ತಿಂಗಳ ಕಾಲಾವಕಾಶ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುತ್ತಿಗೆದಾರರಿಗೆ ಮನವಿ ಮಾಡಿದರು.

ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಹಣಕಾಸು ಇಲಾಖೆಯೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಗುತ್ತಿಗೆದಾರರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (KSCA) ನಿಯೋಗವು ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸನ್ಮಾನಿಸಿತು. ಬಳಿಕ, ಹಲವು ಬೇಡಿಕೆಗಳ ಜೊತೆಗೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಬಿಲ್‌ಗಳನ್ನು ಶೀಘ್ರ ಪಾವತಿಸುವಂತೆ ಮನವಿ ಪತ್ರ ಸಲ್ಲಿಸಿತು.

ಸಂಘದ ಅಧ್ಯಕ್ಷ ಆರ್. ಮಂಜುನಾಥ್, ಗುತ್ತಿಗೆದಾರರ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬಾಕಿ ಬಿಲ್‌ಗಳನ್ನು ಪಾವತಿಸಲು ಮೂರು ತಿಂಗಳ ಕಾಲಾವಕಾಶ ಕೋರಿದ್ದಾರೆ ಎಂದು ತಿಳಿಸಿದರು.

ಮೊದಲು ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ, ನಂತರ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಿಲ್‌ಗಳ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಅಗತ್ಯವಿದ್ದರೆ ಸಾಲ ಪಡೆದು ಕೂಡ ಬಾಕಿ ಬಿಲ್‌ಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ನಮಗೆ ಭರವಸೆ ನೀಡಿದ್ದಾರೆ ಎಂದು ಮಂಜುನಾಥ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!