ಕೆ.ಎನ್. ರಾಜಣ್ಣ 
ರಾಜ್ಯ

ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರ 2028ರ ಚುನಾವಣೆಯಲ್ಲಿ ಗೆಲುವು: ನನಗೆ ಸಚಿವ ಸ್ಥಾನ ಬೇಡ; KN ರಾಜಣ್ಣ

ಸಿದ್ದರಾಮಯ್ಯ ಅವರನ್ನು ಕಡೆಗಣಿಸಲು ಸಾಧ್ಯವೇ ಇಲ್ಲ. ಜನ ನಾಯಕರೆಂದು ಗುರುತಿಸಿಕೊಂಡ ವರ ಶಕ್ತಿ, ಜನಪ್ರಿಯತೆಯನ್ನು ತುಳಿಯಲು ಸಾಧ್ಯವೂ ಇಲ್ಲ ಎಂದರು.

ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಜನ ನಾಯಕ. ಅವರನ್ನು ದೂರ ಇಟ್ಟು ಪಕ್ಷ ಸಂಘಟನೆ ಮಾಡುತ್ತೇವೆಂದರೆ, ಅದು ಒಂದು ದೊಡ್ಡ ಪ್ರಮಾದವಾಗಲಿದೆ ಎಂದು ಶಾಸಕ ಕೆ.ಎನ್‌. ರಾಜಣ್ಣ ಅಭಿಪ್ರಾಯಪಟ್ಟರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋದರೆ ಮಾತ್ರ ನಾವು 2028ರ ಚುನಾವಣೆ ಗೆಲ್ಲುತ್ತೇವೆ ಎಂದೂ ಹೇಳಿದರು. ಸದ್ಯದಲ್ಲಿಯೇ ಪಾಲಿಕೆ ಚುನಾವಣೆ ಎದುರಿಸಬೇಕಾಗುತ್ತದೆ.

ಸಿದ್ದರಾಮಯ್ಯ ಅವರನ್ನು ಕಡೆಗಣಿಸಲು ಸಾಧ್ಯವೇ ಇಲ್ಲ. ಜನ ನಾಯಕರೆಂದು ಗುರುತಿಸಿಕೊಂಡ ವರ ಶಕ್ತಿ, ಜನಪ್ರಿಯತೆಯನ್ನು ತುಳಿಯಲು ಸಾಧ್ಯವೂ ಇಲ್ಲ ಎಂದರು.

ಇನ್ನೂ ಸಚಿವ ಸ್ಥಾನಕ್ಕಾಗಿ ಶಾಸಕರು ಲಾಭಿ ನಡೆಸುತ್ತಿರುವ ನಡುವೆ ನನಗೆ ಮಂತ್ರಿ ಸ್ಥಾನ ಬೇಡ ಎಂದು ಶಾಸಕ ರಾಜಣ್ಣ ಹೇಳಿದ್ದಾರೆ. ನನಗೆ ಕೊಟ್ಟರೂ ಸಚಿವ ಸ್ಥಾನ ಬೇಡ. ಹಾಗೆಂದು ವೈರಾಗ್ಯ ಎಂದೇನೂ ಇಲ್ಲ. ನಾನು ಎರಡು ವರ್ಷ ಸಚಿವನಾಗಿ ನನ್ನ ಕೆಲಸವನ್ನು ಪ್ರಾಮಾಣಿಕವಾಗಿ, ದಕ್ಷತೆಯಿಂದ ಮಾಡಿದ್ದೇನೆ. ಹೀಗಾಗಿ, ಬೇರೆಯವರಿಗೂ ಅವಕಾಶ ಕೊಡಲಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನ್ಮಸಿದ್ಧ ಪೌರತ್ವ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಟ್ರಂಪ್‌ಗೆ ಭಾರೀ ಶಾಕ್, 'ದೇಶಕ್ಕೆ ಮಾರಕ' ಎಂದ ಅಮೆರಿಕ ಅಧ್ಯಕ್ಷ..!

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?

ಜನ್ಮಸಿದ್ಧ ಪೌರತ್ವ ವಿವಾದ: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಚೀನಾಗೆ ಅಭಿನಂದನೆ ತಿಳಿಸಿದ ಟ್ರಂಪ್, ಕಾರಣ..?

ಮಂಗಳೂರಿನಲ್ಲಿ ಭಾರೀ ಮಳೆಗೆ ಭೂಕುಸಿತ: ಮನೆಯ ಮೇಲೆ ಮಣ್ಣು ಕುಸಿದು ಮೂವರ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ..!

ರಾಜಸ್ಥಾನ: Delhi-Mumbai ಎಕ್ಸ್‌ಪ್ರೆಸ್‌ವೇ; ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 7 ಮಂದಿ ಸಜೀವ ದಹನ, 15 ಜನರಿಗೆ ಗಾಯ