ಸಾಂದರ್ಭಿಕ ಚಿತ್ರ 
ರಾಜ್ಯ

ಗೃಹ ಜ್ಯೋತಿ ಯೋಜನೆ ಪರಿಶೀಲನೆ ಆರಂಭ; ಮೊದಲ ದಿನ 2,500ಕ್ಕೂ ಹೆಚ್ಚು ಮನೆಗಳಿಗೆ ಬೆಸ್ಕಾಂ ಭೇಟಿ

ಬೆಸ್ಕಾಂ ವ್ಯಾಪ್ತಿಯ ವಿವಿಧ ಜಿಲ್ಲೆಗಳ ಮನೆಗಳಿಗೆ ಮೀಟರ್‌ ರೀಡರ್‌ಗಳು ಹಾಗೂ ಕ್ಷೇತ್ರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಗ್ರಹಿಸಿದ ಮಾಹಿತಿಯನ್ನು ಸೇವಾ ಸಿಂಧು ಮೊಬೈಲ್‌ ಅಪ್ಲಿಕೇಶನ್‌ನಲ್ಲಿ ಹಾಗೂ ಮುದ್ರಿತ ನಮೂನೆಯಲ್ಲಿ ದಾಖಲಿಸಲಾಯಿತು ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನಾ ಅಭಿಯಾನದ ಮೊದಲ ದಿನವಾದ ನಿನ್ನೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಅಧಿಕಾರಿಗಳು 2,536 ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿದರು.

ಬೆಸ್ಕಾಂ ವ್ಯಾಪ್ತಿಯ ವಿವಿಧ ಜಿಲ್ಲೆಗಳ ಮನೆಗಳಿಗೆ ಮೀಟರ್‌ ರೀಡರ್‌ಗಳು ಹಾಗೂ ಕ್ಷೇತ್ರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಗ್ರಹಿಸಿದ ಮಾಹಿತಿಯನ್ನು ಸೇವಾ ಸಿಂಧು ಮೊಬೈಲ್‌ ಅಪ್ಲಿಕೇಶನ್‌ನಲ್ಲಿ ಹಾಗೂ ಮುದ್ರಿತ ನಮೂನೆಯಲ್ಲಿ ದಾಖಲಿಸಲಾಯಿತು ಎಂದು ಬೆಸ್ಕಾಂ ತಿಳಿಸಿದೆ.

ಸರ್ಕಾರವು ಮೊನ್ನೆ ತಡರಾತ್ರಿ ಹೊರಡಿಸಿದ ಆದೇಶದಂತೆ, ಜುಲೈ 1ರಿಂದ ಆಗಸ್ಟ್‌ 31ರವರೆಗೆ ಎಲ್ಲ ಎಸ್ಕಾಂಗಳ ಮೀಟರ್‌ ರೀಡರ್‌ಗಳು ಮನೆ-ಮನೆಗೆ ತೆರಳಿ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಲಿದ್ದಾರೆ. ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳು ಆರಂಭಿಕ ನೋಂದಣಿಯ ವೇಳೆ ನೀಡಿದ್ದ ಆಧಾರ್‌ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆಯ ಜೊತೆಗೆ ಪಾಸ್‌ಪೋರ್ಟ್‌ ಗಾತ್ರದ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಪ್ಯಾನ್‌ ಕಾರ್ಡ್‌, ಬಾಡಿಗೆ ಅಥವಾ ಗುತ್ತಿಗೆ ಒಪ್ಪಂದದ ವಿವರಗಳು ಹಾಗೂ ವರ್ಗದ ಮಾಹಿತಿಯನ್ನು ಸಲ್ಲಿಸಬೇಕಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪರಿಶೀಲನಾ ಪ್ರಕ್ರಿಯೆ ಸುಗಮವಾಗಿ ನಡೆಯಲು ಫಲಾನುಭವಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಈಗಾಗಲೇ ಎಸ್‌ಎಂಎಸ್‌ ಮೂಲಕ ಮಾಹಿತಿ ಕಳುಹಿಸಲಾಗಿದೆ.

ಕ್ಷೇತ್ರ ಸಿಬ್ಬಂದಿ ಮುದ್ರಿತ ಘೋಷಣಾ ಪತ್ರದಲ್ಲಿ ಫಲಾನುಭವಿಗಳ ಭೌತಿಕ ಸಹಿಯನ್ನೂ ಸಂಗ್ರಹಿಸಲಿದ್ದಾರೆ. ಮನೆಗೆ ಭೇಟಿ ನೀಡುವ ವೇಳೆ ನೋಂದಾಯಿತ ಫಲಾನುಭವಿ ಲಭ್ಯವಿಲ್ಲದಿದ್ದರೆ, ಅವರ ಸಮೀಪದ ಕುಟುಂಬ ಸದಸ್ಯರ ಸಹಿಯನ್ನು ಪಡೆಯಲಾಗುತ್ತದೆ.

ಮನೆ-ಮನೆಗೆ ಭೇಟಿ ವೇಳೆ ಫಲಾನುಭವಿ ಭಾಗಶಃ ಮಾಹಿತಿಯನ್ನು ಮಾತ್ರ ನೀಡಿದರೆ, ಆ ಮಾಹಿತಿಯನ್ನು ಮೊಬೈಲ್‌ ಅಪ್ಲಿಕೇಶನ್‌ನ ಡ್ರಾಫ್ಟ್‌ ವಿಭಾಗದಲ್ಲಿ ತಾತ್ಕಾಲಿಕವಾಗಿ ಉಳಿಸಲಾಗುತ್ತದೆ. ನಂತರ ಕ್ಷೇತ್ರ ಸಿಬ್ಬಂದಿ ಮತ್ತೆ ಮನೆಗೆ ಭೇಟಿ ನೀಡಿ ಉಳಿದ ಮಾಹಿತಿಯನ್ನು ಸಂಗ್ರಹಿಸಿ ಅಂತಿಮವಾಗಿ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!