ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು  online desk
ರಾಜ್ಯ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆ ಈ ತಿಂಗಳಿನಿಂದಲೇ ಖಾತೆಗೆ ಜಮೆ!

ವೇತನ ಪರಿಷ್ಕರಣೆ 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ.

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿದೆ. ಸರ್ಕಾರ 4 ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದ್ದು, ಈ ತಿಂಗಳಿನಿಂದಲೇ ಸಾರಿಗೆ ನೌಕರರ ಖಾತೆಗೆ ಪರಿಷ್ಕೃತ ವೇತನ ಜಮೆಯಾಗಲಿದೆ.

ವೇತನ ಪರಿಷ್ಕರಣೆ 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ.ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈ ಹೆಚ್ಚಳದಿಂದಾಗಿ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದ್ದು, ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂ. ವೆಚ್ಚವಾಗಲಿದೆ. ರಾಮಲಿಂಗಾರೆಡ್ಡಿ ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆದೇಶ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: 7 ಯಾತ್ರಿಕರು ಸಜೀವ ದಹನ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನನ್ ಕಾರನ್ನೇ ನಿಲ್ಲಿಸ್ತೀಯಾ?': ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ, JDS ನಾಯಕನ ಬಂಧನ, Video