ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು

ಜೂನ್‌ 27ರಂದು ಸಂತೋಷ್‌ ತನ್ನ ಸಹಚರರ ಜತೆಗೆ ಸೇರಿ ರೌಡಿಶೀಟರ್‌ ರಾಜು ಕೊಲೆ ಮಾಡಿದ್ದ. ಅದೇ ದಿನ ರಾತ್ರಿ ಕೆ.ಆರ್‌.ಪುರ ಠಾಣೆ ವ್ಯಾಪ್ತಿಯಲ್ಲಿ ಖಾರದಪುಡಿ ಎರಚಿ, ಸರ ಕಳವು ಮಾಡಿ ಪರಾರಿಯಾಗಿದ್ದ.

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿಸಿ ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಯ ಕಾಲಿಗೆ ಜೆ.ಪಿ.ನಗರ ಠಾಣೆಯ ಪೊಲೀಸರು ಗುಂಡು ಹಾರಿಸಿ ಮತ್ತೆ ಬಂಧಿಸಿದ್ದಾರೆ.

ರೌಡಿಶೀಟರ್‌ ಸಂತೋಷ್‌ ಕುಮಾರ್‌ ಗುಂಡೇಟು ತಿಂದ ಆರೋಪಿ. ತಲಘಟ್ಟಪುರದ ಹೆಮ್ಮಿಗೆಪುರದಲ್ಲಿಬುಧವಾರ ಸಂಜೆ ಘಟನೆ ನಡೆದಿದೆ. ಸಂತೋಷ್‌ ವಿರುದ್ಧ ಎರಡು ಕೊಲೆ ಹಾಗೂ ಐದು ಕೊಲೆ ಯತ್ನ ಪ್ರಕರಣಗಳೂ ಸೇರಿ 14 ಪ್ರಕರಣಗಳು ದಾಖಲಾಗಿವೆ.

ಜೂನ್‌ 27ರಂದು ಸಂತೋಷ್‌ ತನ್ನ ಸಹಚರರ ಜತೆಗೆ ಸೇರಿ ರೌಡಿಶೀಟರ್‌ ರಾಜು ಕೊಲೆ ಮಾಡಿದ್ದ. ಅದೇ ದಿನ ರಾತ್ರಿ ಕೆ.ಆರ್‌.ಪುರ ಠಾಣೆ ವ್ಯಾಪ್ತಿಯಲ್ಲಿ ಖಾರದಪುಡಿ ಎರಚಿ, ಸರ ಕಳವು ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.

ಕೊಲೆ ಪ್ರಕರಣದ ಸಂಬಂಧ ಸಂತೋಷ್ ಸೇರಿ ನಾಲ್ವರನ್ನು ಜೆ.ಪಿ.ನಗರ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಬುಧವಾರ ಸಂಜೆ ಮಾರಕಾಸ್ತ್ರ ಇಟ್ಟಿದ್ದ ಸ್ಥಳ ಹಾಗೂ ಸಂಚು ರೂಪಿಸಿದ್ದ ತಲಘಟ್ಟಪುರದ ಹೆಮ್ಮಿಗೆಪುರದಲ್ಲಿ ಸ್ಥಳ ಮಹಜರು ಮಾಡಲು ಪಿಎಸ್‌ಐ ತಂಡ ಕರೆದೊಯ್ದಿತ್ತು.

ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಆತ್ಮರಕ್ಷಣೆಗಾಗಿ, ಮಹಿಳಾ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗುಂಡು ಹಾರಿಸಿ, ಸಂತೋಷ್ ತಪ್ಪಿಸಿಕೊಳ್ಳದಂತೆ ತಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಭಾರೀ ದುರಂತ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು