ಬಳ್ಳಾರಿ: ನೀರು ಮತ್ತು ಒಳಚರಂಡಿ ಎಸ್ಟಿಮೇಟ್ಗೆ ಅನುಮತಿ ನೀಡಲು 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಇಂಜಿನಿಯರ್ ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಇಂಜಿನಿಯರ್ ಗಳಾದ ಅಶೋಕ್ ಮತ್ತು ಕಾಶಿನಾಥ್ ರಿಯಲ್ ಎಸ್ಟೇಟ್ ಉದ್ಯಮಿ ವೀರೇಶ್ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 55,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಳ್ಳಾರಿಯಲ್ಲಿ 2.47 ಎಕರೆಯ ಖಾಸಗಿ ಲೇಔಟ್ ಗೆ ಅನುಮತಿ ನೀಡಲು ಲಂಚ ನೀಡುವಂತೆ ಒತ್ತಾಯಿಸಿದ್ದರು. ಅದರಂತೆ 55,000 ಲಂಚ ಪಡೆದು ಹಣ ಹಂಚಿಕೊಳ್ಳುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.