ಥಣಿಸಂದ್ರದಲ್ಲಿ ಪಾದಚಾರಿಗಳಿಗೆ ದಾರಿ ಮಾಡಿಕೊಡಲು ಜಿಬಿಎ ಕಾರ್ಮಿಕರು ಪಾದಚಾರಿ ಮಾರ್ಗದಿಂದ ಸೂಚನಾ ಫಲಕಗಳನ್ನು ತೆಗೆದುಹಾಕಿದರು. 
ರಾಜ್ಯ

ನಗರದ ಶೇ.20ರಷ್ಟು ಪ್ರಮುಖ ರಸ್ತೆಗಳಲ್ಲಷ್ಟೇ ಫುಟ್‌ಪಾತ್ ತೆರವು: ಉಳಿದ ಶೇ.80ರಷ್ಟು ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ; ರಾಜ್ಯ ಸರ್ಕಾರ

ನಗರದ ಪ್ರಮುಖ ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಕೇವಲ ಶೇ.20ರಷ್ಟು ಭಾಗದಲ್ಲಷ್ಟೇ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ಶೇ.80ರಷ್ಟು ವಾರ್ಡ್ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅವಕಾಶ ಮುಂದುವರಿಯಲಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಎದ್ದಿರುವ ಆತಂಕಗಳ ನಡುವೆಯೇ, ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ನಗರದ ಪ್ರಮುಖ ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಕೇವಲ ಶೇ.20ರಷ್ಟು ಭಾಗದಲ್ಲಷ್ಟೇ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ಶೇ.80ರಷ್ಟು ವಾರ್ಡ್ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅವಕಾಶ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಗುರುವಾರ ವರ್ಚುವಲ್ ಸಭೆಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯ ಪರಿಶೀಲನೆ ನಡೆಸಿದ ಸಚಿವರು, ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸುವುದು ಸರ್ಕಾರದ ಉದ್ದೇಶವಲ್ಲ, ಬದಲಿಗೆ ಅವರಿಗೆ ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವುದೇ ಗುರಿ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಾದಚಾರಿಗಳಿಗೆ ಸುರಕ್ಷಿತ ಫುಟ್‌ಪಾತ್‌ನಲ್ಲಿ ನಡೆಯುವ ಹಕ್ಕು ಇದೆ. ಒತ್ತುವರಿಯಿಂದ ಪಾದಚಾರಿಗಳು ರಸ್ತೆಯಲ್ಲಿ ನಡೆಯಬೇಕಾಗಿ ಬಂದು ಅಪಘಾತಗಳಲ್ಲಿ ಜೀವ ಕಳೆದುಕೊಳ್ಳುತ್ತಿರುವುದನ್ನು ಸರ್ಕಾರ ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬೀದಿ ವ್ಯಾಪಾರಿಗಳಷ್ಟೇ ಅಲ್ಲದೆ, ತ್ಯಜಿಸಿದ ವಾಹನಗಳು, ಅಕ್ರಮವಾಗಿ ನಿಲುಗಡೆ ಮಾಡಿರುವ ವಾಹನಗಳು, ಫ್ಲೆಕ್ಸ್‌ಗಳು, ಜಾಹೀರಾತು ಫಲಕಗಳು, ರ್ಯಾಂಪ್‌ಗಳು ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿರುವ ಎಲ್ಲ ವಸ್ತುಗಳನ್ನು ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒತ್ತುವರಿ ತೆರವುಗೊಂಡ ತಕ್ಷಣವೇ ಫುಟ್‌ಪಾತ್ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಬೇಕು. ಕಾರ್ಯಾಚರಣೆ ಪೂರ್ಣಗೊಳ್ಳುವವರೆಗೆ ಕಾಯುವ ಅಗತ್ಯವಿಲ್ಲ ಎಂದು ನಿರ್ದೇಶನ ನೀಡಿದರು.

ಜುಲೈ 1ರಿಂದ 10ರವರೆಗೆ 'ಸೇಫ್ ಫುಟ್‌ಪಾತ್ ಅಭಿಯಾನ'

ಜುಲೈ 1ರಿಂದ 10ರವರೆಗೆ ಸುಮಾರು 1,000 ಕಿ.ಮೀ. ರಸ್ತೆಗಳಲ್ಲಿ 'ಸೇಫ್ ಫುಟ್‌ಪಾತ್ ಅಭಿಯಾನ' ನಡೆಯುತ್ತಿದ್ದು, ಅಕ್ರಮ ಪಾರ್ಕಿಂಗ್, ಫುಟ್‌ಪಾತ್ ಆಕ್ರಮಿಸಿರುವ ಅಂಗಡಿಗಳು, ಕಿಯೋಸ್ಕ್‌ಗಳು ಹಾಗೂ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗುತ್ತಿದೆ.

ಈ ಕಾರ್ಯಾಚರಣೆ ಬೀದಿ ವ್ಯಾಪಾರಿಗಳ ಕಾಯ್ದೆ ಹಾಗೂ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನ್ವಯ ನಡೆಯುತ್ತಿದ್ದು, ಬಿಬಿಎಂಪಿ, ಇತರ ನಾಗರಿಕ ಸಂಸ್ಥೆಗಳು ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾನಿಗೊಳಗಾದ ಫುಟ್‌ಪಾತ್‌ಗಳನ್ನು ದುರಸ್ತಿಗೊಳಿಸುವ ಕಾರ್ಯವೂ ಕೈಗೆತ್ತಿಕೊಳ್ಳಲಾಗಿದೆ.

ಬೀದಿ ವ್ಯಾಪಾರಿಗಳಿಂದ ಪ್ರತಿಭಟನೆಯ ಎಚ್ಚರಿಕೆ

ಇನ್ನೊಂದೆಡೆ, ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಬೀದಿ ವ್ಯಾಪಾರಿಗಳು ನಗರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

15 ಸಂಘಟನೆಗಳನ್ನು ಒಳಗೊಂಡಿರುವ ಜಂಟಿ ಬೀದಿ ವ್ಯಾಪಾರಿಗಳ ಸಮಿತಿ ಜುಲೈ 7 ಅಥವಾ 9ರಂದು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಹಾಗೂ ನಗರ ಬಂದ್‌ಗೆ ಕರೆ ನೀಡುವ ಬಗ್ಗೆ ಘೋಷಿಸಿದೆ.

ನವ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕೇಶವಮೂರ್ತಿ ಅವರು ಮಾತನಾಡಿ, ಈ ಕಾರ್ಯಾಚರಣೆಯಿಂದ ಸುಮಾರು 1.20 ಲಕ್ಷ ಬೀದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ಆರೋಪಿಸಿದ್ದಾರೆ.

ಸಚಿವರು ಹೇಳಿದಂತೆ ಯಾವುದೇ ಪೂರ್ವ ನೋಟಿಸ್ ನೀಡಿಲ್ಲ. ಕಾನೂನಿನ ಪ್ರಕಾರ ವ್ಯಾಪಾರ ವಲಯ (ವೆಂಡಿಂಗ್ ಝೋನ್)ಗಳನ್ನು ಗುರುತಿಸಿ, ಪುನರ್ವಸತಿ ಕಲ್ಪಿಸಬೇಕು ಎಂಬುದೇ ನಮ್ಮ ಬೇಡಿಕೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?

'ಇರಾನ್ ಸಂಪೂರ್ಣ ಮಣಿದಿದೆ', 'ನಮಗೆ ಬೇಕಿದ್ದ ಬಹುತೇಕ ಎಲ್ಲ ಷರತ್ತುಗಳಿಗೆ ಒಪ್ಪಿದೆ': ಟ್ರಂಪ್‌ ಮಹತ್ವದ ಹೇಳಿಕೆ

ಜುಲೈ 4ರಿಂದ ಅಲಿ ಖಮೇನಿ ಅಂತಿಮ ವಿಧಿವಿಧಾನ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ, ಭದ್ರತಾ ಕಾರಣಕ್ಕೆ ಪುತ್ರ ಮೊಜ್ತಬಾ ಗೈರು..!

ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಕಾರ್ಮಿಕರ ಸಾವಿಗೆ ನ್ಯಾಯ ಬೇಕು; ಪರಿಹಾರ, ತನಿಖೆಗೆ ಪ್ರತಿಪಕ್ಷಗಳ ಆಗ್ರಹ

ಮಕ್ಕಳನ್ನು ವಾಷಿಂಗ್ ಮೆಷಿನ್ ನಲ್ಲಿಟ್ಟು ಕ್ರೌರ್ಯ: Capgemini ಡೇ-ಕೇರ್ ಕೇಂದ್ರ ತಾತ್ಕಾಲಿಕ ಬಂದ್, ತನಿಖೆ ಆರಂಭ