ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ನಾ ಬರೋವರೆಗೂ ಕನಕಪುರದಲ್ಲಿ ಕರೆಂಟ್‌ ಇತ್ತೇನಪ್ಪಾ? ಬೆಂಗಳೂರು ದಕ್ಷಿಣ ಜಿಲ್ಲೆಗೆ ಕೊಡುಗೆ ಪಟ್ಟಿ ಮಾಡಿದ ಎಚ್‌ಡಿ ಕುಮಾರಸ್ವಾಮಿ

ನಾನು ಮುಖ್ಯಮಂತ್ರಿಯಾದ ಮೇಲೆ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಪ್ರಾಜೆಕ್ಟ್‌ ವಿಚಾರವಾಗಿ ರಾಜಕೀಯ ಕಾಳಗದಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಈಗ ತಮ್ಮ ತಮ್ಮ ಅಧಿಕಾರ ಅವಧಿಯ ಇತಿಹಾಸದ ಪುಟಗಳನ್ನು ತೆರೆಯುವ ಪ್ರಯತ್ನಕ್ಕೆ ಕೈಹಾಕಿದ್ದಾರೆ.

ರಾಮನಗರ ಅಥವಾ ಬೆಂಗಳೂರು ದಕ್ಷಿಣ ಜಿಲ್ಲೆಗೆ ಯಾರ ಕೊಡುಗೆ ಹೆಚ್ಚಿದೆ ಎಂಬ ಚರ್ಚೆ ಹುಟ್ಟುಹಾಕಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ತಮ್ಮ ಅಧಿಕಾರಾವಧಿಯಲ್ಲಿ ರಾಮನಗರ ಮತ್ತು ಕನಕಪುರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ ಎಂದು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್‌ ಆಡಳಿತವಿದ್ದಾಗ ರಾಮನಗರ ಮತ್ತು ಕನಕಪುರದಲ್ಲಿ ಯಾವುದೇ ಅಭಿವೃದ್ಧಿ ಆಗಿರಲಿಲ್ಲ. ಅವರು ಅಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಕನಕಪುರದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್ ನೀಡಲು ಸಾಧ್ಯವಾಗಿರಲಿಲ್ಲ

ನಾನು ಮುಖ್ಯಮಂತ್ರಿಯಾದ ಮೇಲೆ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ತಾವು ಅಧಿಕಾರಕ್ಕೆ ಬರುವವರೆಗೂ ಜಿಲ್ಲೆಯಲ್ಲಿ ಯಾವ ಕೆಲಸವೂ ಆಗಿರಲಿಲ್ಲ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ನಾನು ರಾಮನಗರಕ್ಕೆ ಕಾಲಿಟ್ಟಾಗ ಆ ಜಿಲ್ಲೆ ಹೇಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಜಿಲ್ಲೆಯ ಯಾವ ಹಳ್ಳಿಗಳಿಗೂ ಸರಿಯಾದ ರಸ್ತೆ ಇರಲಿಲ್ಲ. ಕನಕಪುರದಲ್ಲಿ ಕರೆಂಟ್‌ ಇರಲಿಲ್ಲ.

ಜನ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದಿದ್ದು ಯಾರ ಕಾಲದಲ್ಲಿ ಎಂಬುದನ್ನು ಮುಖ್ಯಮಂತ್ರಿಗಳು ಹೇಳಬೇಕು ಎಂದು ಎಚ್‌ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!